AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾದ ಐಐಎಂ ಬಾಲಕರ ಹಾಸ್ಟೆಲ್‌ನಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ

ಪಶ್ಚಿಮ ಬಂಗಾಳದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಕೊಲ್ಕತ್ತಾ (ಐಐಎಂ-ಸಿ)ದಲ್ಲಿ ಓದುತ್ತಿರುವ ಯುವತಿಯೊಬ್ಬರು ಶುಕ್ರವಾರ ಕ್ಯಾಂಪಸ್‌ನಲ್ಲಿ ತನ್ನ ಜೊತೆ ಓದುವ ವಿದ್ಯಾರ್ಥಿಯಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ. ಐಐಎಂ-ಕೊಲ್ಕತ್ತಾ ವಿದ್ಯಾರ್ಥಿನಿ ಪೊಲೀಸರಿಗೆ ಈ ಘಟನೆಯ ಬಗ್ಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ತನಿಖೆ ಮುಂದುವರೆದಿದೆ.

ಕೊಲ್ಕತ್ತಾದ ಐಐಎಂ ಬಾಲಕರ ಹಾಸ್ಟೆಲ್‌ನಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ
IIM Calcutta
ಸುಷ್ಮಾ ಚಕ್ರೆ
|

Updated on: Jul 12, 2025 | 6:03 PM

Share

ಕೊಲ್ಕತ್ತಾ, ಜುಲೈ 12: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಕೊಲ್ಕತ್ತಾ (ಐಐಎಂ-ಸಿ)ದ ಬಾಲಕರ ಹಾಸ್ಟೆಲ್‌ನಲ್ಲಿ ಅತ್ಯಾಚಾರದ ಆರೋಪ ವರದಿಯಾಗಿದ್ದು, ಇದು ಐಐಎಂನಲ್ಲಿ (IIM) ಆಘಾತಕಾರಿ ಅಲೆಗಳನ್ನು ಸೃಷ್ಟಿಸಿದೆ. ಐಐಎಂ ವಿದ್ಯಾರ್ಥಿನಿಯಲ್ಲದಿದ್ದರೂ ಸ್ನೇಹಿತನೊಂದಿಗೆ ವಾಸಿಸುತ್ತಿದ್ದ ಯುವತಿಯನ್ನು ಆಕೆಯ ಗೆಳೆಯ ಬಾಲಕರ ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಅಲ್ಲಿ ಆಕೆಗೆ ಡ್ರಗ್ ನೀಡಿ ಅತ್ಯಾಚಾರ ನಡೆಸಲಾಗಿದೆ. ಈಗಾಗಲೇ ಆರೋಪಿಯನ್ನು ಗುರುತಿಸಿ ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವೆ ಪ್ರತಿಷ್ಠಿತ ಐಐಎಂನಲ್ಲೂ ಈ ರೀತಿಯ ವರ್ತನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಆರೋಪಿಯನ್ನು ಐಐಎಂ-ಸಿ ವಿದ್ಯಾರ್ಥಿ ಪರಮಾನಂದ ಟೊಪ್ಪನ್ವರ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ. ಅಲಿಪೋರ್ ಪೊಲೀಸ್ ನ್ಯಾಯಾಲಯವು ಆತನನ್ನು ಜುಲೈ 19ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಶುಕ್ರವಾರ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಕೆ ತಕ್ಷಣ ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯು ಸಂಸ್ಥೆಯೊಳಗಿನ ಕ್ಯಾಂಪಸ್ ಭದ್ರತೆಯ ಬಗ್ಗೆ ಗಮನಾರ್ಹ ಕಳವಳವನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಕೌನ್ಸೆಲಿಂಗ್‌ಗೆ ಆಮಿಷವೊಡ್ಡಿ, ಜ್ಯೂಸ್​​ನಲ್ಲಿ ಡ್ರಗ್ಸ್ ಬೆರೆಸಿ ಕೊಡಲಾಗಿದೆ ಮತ್ತು ಆಕೆಯ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರಿಗೆ ಸಂತ್ರಸ್ತೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯನ್ನು ಐಐಎಂ-ಕೊಲ್ಕತ್ತಾ ಕ್ಯಾಂಪಸ್ ಬಾಲಕರ ಹಾಸ್ಟೆಲ್‌ಗೆ ಉದ್ಯೋಗ ಕೌನ್ಸೆಲಿಂಗ್​​ಗಾಗಿ ಆಹ್ವಾನಿಸಲಾಗಿತ್ತು. ಅಲ್ಲಿ, ಆಕೆಗೆ ಪಿಜ್ಜಾ ಮತ್ತು ತಂಪು ಪಾನೀಯವನ್ನು ನೀಡಲಾಯಿತು. ಅದರಲ್ಲಿ ನಿದ್ರಾಜನಕ ಬೆರೆಸಲಾಗಿದೆ ಎಂದು ಆಕೆ ಶಂಕಿಸಿದ್ದಾರೆ. ಆ ಪಾನೀಯ ಸೇವಿಸಿದ ನಂತರ, ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಆಕೆಗೆ ಪ್ರಜ್ಞೆ ಮರಳಿ ಬಂದ ನಂತರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆಕೆಗೆ ಗೊತ್ತಾಯಿತು. ಕೂಡಲೆ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಅತ್ಯಾಚಾರ ಕೇಸ್: ಜಾಮೀನು ವಿಚಾರವಾಗಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮಹತ್ವದ ಸೂಚನೆ

ಈ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದರ ನಂತರ, ಆಕೆ ತಕ್ಷಣ ತನ್ನ ಸ್ನೇಹಿತನನ್ನು ಸಂಪರ್ಕಿಸಿ ನಂತರ ದೂರು ನೀಡಿದ್ದಾರೆ. ಆರೋಪಿ ವಿದ್ಯಾರ್ಥಿನಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಯಿತು. ಪೊಲೀಸರು ಪ್ರಸ್ತುತ ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ