AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 03, 2021 | 11:35 AM

Share

ಜೀವನ ನಿರ್ವಹಣೆಗಾಗಿ ರೈಲುಗಳಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳಾ ಇಂಜಿನಿಯರ್​ ಒಬ್ಬರಿಗೆ ರೈಲ್ವೆ ಸಂರಕ್ಷಣಾ ಪಡೆ (RPF) ಕಾನ್ಸ್​ಟೆಬಲ್​ ಥಳಿಸಿದ್ದಾರೆ. ಮಹಿಳೆ ಟಿಕೆಟ್​ ಇಲ್ಲದೆ ಪ್ರಯಾಣ ಮಾಡಿದ್ದಾರೆ ಎಂಬ ಕಾರಣಕ್ಕೆ ಹೊಡೆದಿದ್ದಾರೆ. ಮಹಿಳೆ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಕ್ಟೋಬರ್​ 1 ರಂದು ತನ್ನ ಮೇಲೆ ಹಲ್ಲೆ ನಡೆದಿದ್ದಾಗಿ ಹೇಳಿಕೊಂಡಿದ್ದಾರೆ.   

ಮಹಿಳೆಯ ಹೆಸರು ಅನಿತಾ​ರಾಜ್​ ಶಿರಹಟ್ಟಿ. ಇವರು ಇಂಜಿನಿಯರಿಂದ ಪದವಿ ಮುಗಿಸಿದ್ದರೂ, ಎಲ್ಲಿಯೂ ಕೆಲಸ ಸಿಗದೆ,​ ಜೀವನನಿರ್ವಹಣೆಗಾಗಿ ರೈಲಿನಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದರು. ಒಡಿಶಾದ ಪಾಂಪೋಶ್​ ರೈಲ್ವೆ ಸ್ಟೇಶನ್​​ನಲ್ಲಿ ಈ ಘಟನೆ ನಡೆದಿದೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೇ, ತಾನು ಗುಂಡಿಯಾದಿಂದ ಕೋಲ್ಕತ್ತದ ಹೌರಾಹ್​​ಗೆ ಗೀತಾಂಜಲಿ ಎಕ್ಸ್​ಪ್ರೆಸ್​​ನಲ್ಲಿ ಹೋಗುತ್ತಿದ್ದೆ. ನನ್ನ ಬಳಿ ಹಣವಿರಲಿಲ್ಲ..ಟಿಕೆಟ್​ ತೆಗೆದುಕೊಂಡಿರಲಿಲ್ಲ. ಹೀಗಾಗಿ ಆರ್​ಪಿಎಫ್​ ಕಾನ್​ಸ್ಟೆಬಲ್​​ ನನಗೆ ಹೊಡೆದಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಹಾಗೇ ತಾನು ಕರ್ನಾಟಕದ ಧಾರವಾಡದ ಕಾಲೇಜೊಂದರಲ್ಲಿ ಇಂಜಿನಿಯರಿಂಗ್​ ಪದವಿ ಪಡೆದಿದ್ದಾಗಿಯೂ ತಿಳಿಸಿದ್ದಾರೆ.

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಸಿಬ್ಬಂದಿ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ. ನನ್ನ ಮೈಮುಟ್ಟಲು, ಹೊಡೆಯಲು ಅವರಿಗೆ ಅಧಿಕಾರ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ್ದಾರೆ. ಅಂದಹಾಗೆ ಈ ಕಾನ್​ಸ್ಟೆಬಲ್​ ಜಮ್​ಶೆಡ್​ಪುರದ ಆರ್​ಪಿಎಫ್​ ಯುನಿಟ್​ನವರು ಎನ್ನಲಾಗಿದೆ.

ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಪ್ರಕರಣ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆ (GRP) ಯ ಅಧಿಕಾರಿ ರಂಜನ್​ ಪಟ್ನಾಯಕ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಗಾಯಗೊಂಡ ಮಹಿಳೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಮತ್ತು ಆಕೆಯ ಮೇಲೆ ಹಲ್ಲೆ ನಡೆಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಕೇಸ್​ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?