AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 03, 2021 | 11:35 AM

Share

ಜೀವನ ನಿರ್ವಹಣೆಗಾಗಿ ರೈಲುಗಳಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳಾ ಇಂಜಿನಿಯರ್​ ಒಬ್ಬರಿಗೆ ರೈಲ್ವೆ ಸಂರಕ್ಷಣಾ ಪಡೆ (RPF) ಕಾನ್ಸ್​ಟೆಬಲ್​ ಥಳಿಸಿದ್ದಾರೆ. ಮಹಿಳೆ ಟಿಕೆಟ್​ ಇಲ್ಲದೆ ಪ್ರಯಾಣ ಮಾಡಿದ್ದಾರೆ ಎಂಬ ಕಾರಣಕ್ಕೆ ಹೊಡೆದಿದ್ದಾರೆ. ಮಹಿಳೆ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಕ್ಟೋಬರ್​ 1 ರಂದು ತನ್ನ ಮೇಲೆ ಹಲ್ಲೆ ನಡೆದಿದ್ದಾಗಿ ಹೇಳಿಕೊಂಡಿದ್ದಾರೆ.   

ಮಹಿಳೆಯ ಹೆಸರು ಅನಿತಾ​ರಾಜ್​ ಶಿರಹಟ್ಟಿ. ಇವರು ಇಂಜಿನಿಯರಿಂದ ಪದವಿ ಮುಗಿಸಿದ್ದರೂ, ಎಲ್ಲಿಯೂ ಕೆಲಸ ಸಿಗದೆ,​ ಜೀವನನಿರ್ವಹಣೆಗಾಗಿ ರೈಲಿನಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದರು. ಒಡಿಶಾದ ಪಾಂಪೋಶ್​ ರೈಲ್ವೆ ಸ್ಟೇಶನ್​​ನಲ್ಲಿ ಈ ಘಟನೆ ನಡೆದಿದೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೇ, ತಾನು ಗುಂಡಿಯಾದಿಂದ ಕೋಲ್ಕತ್ತದ ಹೌರಾಹ್​​ಗೆ ಗೀತಾಂಜಲಿ ಎಕ್ಸ್​ಪ್ರೆಸ್​​ನಲ್ಲಿ ಹೋಗುತ್ತಿದ್ದೆ. ನನ್ನ ಬಳಿ ಹಣವಿರಲಿಲ್ಲ..ಟಿಕೆಟ್​ ತೆಗೆದುಕೊಂಡಿರಲಿಲ್ಲ. ಹೀಗಾಗಿ ಆರ್​ಪಿಎಫ್​ ಕಾನ್​ಸ್ಟೆಬಲ್​​ ನನಗೆ ಹೊಡೆದಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಹಾಗೇ ತಾನು ಕರ್ನಾಟಕದ ಧಾರವಾಡದ ಕಾಲೇಜೊಂದರಲ್ಲಿ ಇಂಜಿನಿಯರಿಂಗ್​ ಪದವಿ ಪಡೆದಿದ್ದಾಗಿಯೂ ತಿಳಿಸಿದ್ದಾರೆ.

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಸಿಬ್ಬಂದಿ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ. ನನ್ನ ಮೈಮುಟ್ಟಲು, ಹೊಡೆಯಲು ಅವರಿಗೆ ಅಧಿಕಾರ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ್ದಾರೆ. ಅಂದಹಾಗೆ ಈ ಕಾನ್​ಸ್ಟೆಬಲ್​ ಜಮ್​ಶೆಡ್​ಪುರದ ಆರ್​ಪಿಎಫ್​ ಯುನಿಟ್​ನವರು ಎನ್ನಲಾಗಿದೆ.

ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಪ್ರಕರಣ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆ (GRP) ಯ ಅಧಿಕಾರಿ ರಂಜನ್​ ಪಟ್ನಾಯಕ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಗಾಯಗೊಂಡ ಮಹಿಳೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಮತ್ತು ಆಕೆಯ ಮೇಲೆ ಹಲ್ಲೆ ನಡೆಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಕೇಸ್​ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ