AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 03, 2021 | 11:35 AM

Share

ಜೀವನ ನಿರ್ವಹಣೆಗಾಗಿ ರೈಲುಗಳಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳಾ ಇಂಜಿನಿಯರ್​ ಒಬ್ಬರಿಗೆ ರೈಲ್ವೆ ಸಂರಕ್ಷಣಾ ಪಡೆ (RPF) ಕಾನ್ಸ್​ಟೆಬಲ್​ ಥಳಿಸಿದ್ದಾರೆ. ಮಹಿಳೆ ಟಿಕೆಟ್​ ಇಲ್ಲದೆ ಪ್ರಯಾಣ ಮಾಡಿದ್ದಾರೆ ಎಂಬ ಕಾರಣಕ್ಕೆ ಹೊಡೆದಿದ್ದಾರೆ. ಮಹಿಳೆ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಕ್ಟೋಬರ್​ 1 ರಂದು ತನ್ನ ಮೇಲೆ ಹಲ್ಲೆ ನಡೆದಿದ್ದಾಗಿ ಹೇಳಿಕೊಂಡಿದ್ದಾರೆ.   

ಮಹಿಳೆಯ ಹೆಸರು ಅನಿತಾ​ರಾಜ್​ ಶಿರಹಟ್ಟಿ. ಇವರು ಇಂಜಿನಿಯರಿಂದ ಪದವಿ ಮುಗಿಸಿದ್ದರೂ, ಎಲ್ಲಿಯೂ ಕೆಲಸ ಸಿಗದೆ,​ ಜೀವನನಿರ್ವಹಣೆಗಾಗಿ ರೈಲಿನಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದರು. ಒಡಿಶಾದ ಪಾಂಪೋಶ್​ ರೈಲ್ವೆ ಸ್ಟೇಶನ್​​ನಲ್ಲಿ ಈ ಘಟನೆ ನಡೆದಿದೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೇ, ತಾನು ಗುಂಡಿಯಾದಿಂದ ಕೋಲ್ಕತ್ತದ ಹೌರಾಹ್​​ಗೆ ಗೀತಾಂಜಲಿ ಎಕ್ಸ್​ಪ್ರೆಸ್​​ನಲ್ಲಿ ಹೋಗುತ್ತಿದ್ದೆ. ನನ್ನ ಬಳಿ ಹಣವಿರಲಿಲ್ಲ..ಟಿಕೆಟ್​ ತೆಗೆದುಕೊಂಡಿರಲಿಲ್ಲ. ಹೀಗಾಗಿ ಆರ್​ಪಿಎಫ್​ ಕಾನ್​ಸ್ಟೆಬಲ್​​ ನನಗೆ ಹೊಡೆದಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಹಾಗೇ ತಾನು ಕರ್ನಾಟಕದ ಧಾರವಾಡದ ಕಾಲೇಜೊಂದರಲ್ಲಿ ಇಂಜಿನಿಯರಿಂಗ್​ ಪದವಿ ಪಡೆದಿದ್ದಾಗಿಯೂ ತಿಳಿಸಿದ್ದಾರೆ.

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಸಿಬ್ಬಂದಿ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ. ನನ್ನ ಮೈಮುಟ್ಟಲು, ಹೊಡೆಯಲು ಅವರಿಗೆ ಅಧಿಕಾರ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ್ದಾರೆ. ಅಂದಹಾಗೆ ಈ ಕಾನ್​ಸ್ಟೆಬಲ್​ ಜಮ್​ಶೆಡ್​ಪುರದ ಆರ್​ಪಿಎಫ್​ ಯುನಿಟ್​ನವರು ಎನ್ನಲಾಗಿದೆ.

ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಪ್ರಕರಣ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆ (GRP) ಯ ಅಧಿಕಾರಿ ರಂಜನ್​ ಪಟ್ನಾಯಕ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಗಾಯಗೊಂಡ ಮಹಿಳೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಮತ್ತು ಆಕೆಯ ಮೇಲೆ ಹಲ್ಲೆ ನಡೆಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಕೇಸ್​ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?