AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

ರೈಲಲ್ಲಿ ಹಣ್ಣು ಮಾರಿ ಜೀವನ ನಡೆಸುತ್ತಿದ್ದ ಇಂಜಿನಿಯರಿಂಗ್​ ಪದವೀಧರೆಗೆ ಥಳಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಎಫ್​ಐಆರ್​ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 03, 2021 | 11:35 AM

Share

ಜೀವನ ನಿರ್ವಹಣೆಗಾಗಿ ರೈಲುಗಳಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳಾ ಇಂಜಿನಿಯರ್​ ಒಬ್ಬರಿಗೆ ರೈಲ್ವೆ ಸಂರಕ್ಷಣಾ ಪಡೆ (RPF) ಕಾನ್ಸ್​ಟೆಬಲ್​ ಥಳಿಸಿದ್ದಾರೆ. ಮಹಿಳೆ ಟಿಕೆಟ್​ ಇಲ್ಲದೆ ಪ್ರಯಾಣ ಮಾಡಿದ್ದಾರೆ ಎಂಬ ಕಾರಣಕ್ಕೆ ಹೊಡೆದಿದ್ದಾರೆ. ಮಹಿಳೆ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಕ್ಟೋಬರ್​ 1 ರಂದು ತನ್ನ ಮೇಲೆ ಹಲ್ಲೆ ನಡೆದಿದ್ದಾಗಿ ಹೇಳಿಕೊಂಡಿದ್ದಾರೆ.   

ಮಹಿಳೆಯ ಹೆಸರು ಅನಿತಾ​ರಾಜ್​ ಶಿರಹಟ್ಟಿ. ಇವರು ಇಂಜಿನಿಯರಿಂದ ಪದವಿ ಮುಗಿಸಿದ್ದರೂ, ಎಲ್ಲಿಯೂ ಕೆಲಸ ಸಿಗದೆ,​ ಜೀವನನಿರ್ವಹಣೆಗಾಗಿ ರೈಲಿನಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದರು. ಒಡಿಶಾದ ಪಾಂಪೋಶ್​ ರೈಲ್ವೆ ಸ್ಟೇಶನ್​​ನಲ್ಲಿ ಈ ಘಟನೆ ನಡೆದಿದೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೇ, ತಾನು ಗುಂಡಿಯಾದಿಂದ ಕೋಲ್ಕತ್ತದ ಹೌರಾಹ್​​ಗೆ ಗೀತಾಂಜಲಿ ಎಕ್ಸ್​ಪ್ರೆಸ್​​ನಲ್ಲಿ ಹೋಗುತ್ತಿದ್ದೆ. ನನ್ನ ಬಳಿ ಹಣವಿರಲಿಲ್ಲ..ಟಿಕೆಟ್​ ತೆಗೆದುಕೊಂಡಿರಲಿಲ್ಲ. ಹೀಗಾಗಿ ಆರ್​ಪಿಎಫ್​ ಕಾನ್​ಸ್ಟೆಬಲ್​​ ನನಗೆ ಹೊಡೆದಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಹಾಗೇ ತಾನು ಕರ್ನಾಟಕದ ಧಾರವಾಡದ ಕಾಲೇಜೊಂದರಲ್ಲಿ ಇಂಜಿನಿಯರಿಂಗ್​ ಪದವಿ ಪಡೆದಿದ್ದಾಗಿಯೂ ತಿಳಿಸಿದ್ದಾರೆ.

ನನ್ನ ಬಳಿ ಟಿಕೆಟ್​ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಸಿಬ್ಬಂದಿ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್​ಪಿಎಫ್​ ಕಾನ್​ಸ್ಟೆಬಲ್​ ನನಗೆ ಥಳಿಸಿದ್ದಾರೆ. ನನ್ನ ಮೈಮುಟ್ಟಲು, ಹೊಡೆಯಲು ಅವರಿಗೆ ಅಧಿಕಾರ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ್ದಾರೆ. ಅಂದಹಾಗೆ ಈ ಕಾನ್​ಸ್ಟೆಬಲ್​ ಜಮ್​ಶೆಡ್​ಪುರದ ಆರ್​ಪಿಎಫ್​ ಯುನಿಟ್​ನವರು ಎನ್ನಲಾಗಿದೆ.

ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಪ್ರಕರಣ ರೂರ್ಕೆಲಾದ ಸರ್ಕಾರಿ ರೈಲ್ವೆ ಪೊಲೀಸ್​ ಠಾಣೆ (GRP) ಯ ಅಧಿಕಾರಿ ರಂಜನ್​ ಪಟ್ನಾಯಕ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಗಾಯಗೊಂಡ ಮಹಿಳೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಮತ್ತು ಆಕೆಯ ಮೇಲೆ ಹಲ್ಲೆ ನಡೆಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​ ವಿರುದ್ಧ ಕೇಸ್​ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್