AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಪಳನಿಯಲ್ಲಿ ಕೇರಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ‘ನಿರ್ಭಯಾ’ ಪ್ರಕರಣದಂತೆ ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು

ಘಟನೆ ನಡೆದಾಗ ದಂಪತಿಗಳು ದಿಂಡಿಗಲ್ ಜಿಲ್ಲೆಯ ಪಳನಿ ಪ್ರದೇಶದ ಲಾಡ್ಜ್‌ನಲ್ಲಿ ತಂಗಿದ್ದರು ಎಂದು ವರದಿಯಾಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹೇಳಿದ್ದಾರೆ. ಆದರೆ ನಮಗೆ ಈ ರೀತಿಯ ಯಾವುದೇ ದೂರು ಸಿಕ್ಕಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ತಮಿಳುನಾಡಿನ ಪಳನಿಯಲ್ಲಿ ಕೇರಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ‘ನಿರ್ಭಯಾ’ ಪ್ರಕರಣದಂತೆ ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು
ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 12, 2021 | 4:07 PM

Share

ತಿರುವನಂತಪುರಂ: ಕೇರಳದ 40 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ವರದಿಯಾಗಿದೆ . ಜೂನ್ 30 ರಂದು ಮಹಿಳೆ ಮತ್ತು ಆಕೆಯ ಪತಿ ತಮಿಳುನಾಡಿನ ಪ್ರಸಿದ್ಧ ಪಳನಿಯ ಬೆಟ್ಟದ ದೇಗುಲಕ್ಕೆ ಭೇಟಿ ನೀಡಿದ್ದಾಗ ಈ ದುಷ್ಕೃತ್ಯ ನಡೆದಿದೆ.

ಘಟನೆ ನಡೆದಾಗ ದಂಪತಿಗಳು ದಿಂಡಿಗಲ್ ಜಿಲ್ಲೆಯ ಪಳನಿ ಪ್ರದೇಶದ ಲಾಡ್ಜ್‌ನಲ್ಲಿ ತಂಗಿದ್ದರು ಎಂದು ವರದಿಯಾಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹೇಳಿದ್ದಾರೆ. ಆದರೆ ನಮಗೆ ಈ ರೀತಿಯ ಯಾವುದೇ ದೂರು ಸಿಕ್ಕಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತ ಮಹಿಳೆ ಮತ್ತು ಆಕೆಯ ಪತಿ ತಮಿಳುನಾಡು ಮೂಲದವರಾಗಿದ್ದು, ಈ ದಂಪತಿ ಉದ್ಯೋಗ ನಿಮಿತ್ತ ಕಣ್ಣೂರಿನಲ್ಲಿ ವಾಸವಾಗಿದ್ದಾರೆ. ಪತಿ ಆಹಾರ ತರಲು ಹೊರಟಿದ್ದಾಗ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ದೂರು ನೀಡಿದ್ದಾರೆ. ಆರಂಭಿಕ ತನಿಖೆಯ ಪ್ರಕಾರ ಮಹಿಳೆ ಮತ್ತು ಪತಿ ಪಳನಿಗೆ ತೀರ್ಥಯಾತ್ರೆ ಮಾಡುತ್ತಿದ್ದರು. ಮಹಿಳೆಯ ಪತಿ ಆಹಾರ ತರಲು ಹೊರಟಿದ್ದಾಗ ಲಾಡ್ಜ್ನ ವ್ಯವಸ್ಥಾಪಕ ಸೇರಿದಂತೆ ಪುರುಷರ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ, ಆರೋಪಿ ಮಹಿಳೆಯನ್ನು ಹಿಂಸಿಸಿದ್ದಾನೆ ಮತ್ತು ಅವಳ ಖಾಸಗಿ ಭಾಗಗಳಲ್ಲಿ ಬಿಯರ್ ಬಾಟಲಿಗಳನ್ನು ತುರುಕಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪತಿ ಲಾಡ್ಜ್‌ಗೆ ಹಿಂತಿರುಗಿದಾಗ ಆತನನ್ನು ಆರೋಪಿಗಳು ಥಳಿಸಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ. ಈ ಪ್ರಕರಣದ ತನಿಖಾಧಿಕಾರಿಯಾಗಿರುವ ತಲಶ್ಶೇರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) “ನಾನು ಕಣ್ಣೂರಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವರದಿ ಪರಿಶೀಲಿಸಿದ್ದೇನೆ. ಆದರೆ ಅದರ ಆಧಾರದ ಮೇಲೆ ಯಾವುದೇ ಗಾಯಗಳಿಲ್ಲ. ದೂರುದಾರರ ಪ್ರಕಾರ, ಜೂನ್ 20 ರಂದು ಆಪಾದಿತ ಘಟನೆ ನಡೆದಿದ್ದರಿಂದ, ಗಾಯಗಳು ಸಹ ಗುಣವಾಗಬಹುದಿತ್ತು.

ಕಣ್ಣೂರಿನಲ್ಲಿ ಪೊಲೀಸರನ್ನು ಸಂಪರ್ಕಿಸಿದ್ದೇನೆ ಆದರೆ ಅವರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಬಿಎಂಆರ್ಸಿಎಲ್ ದಂಡಾಸ್ತ್ರ ಪ್ರಯೋಗ: ನಿತ್ಯ ಎಷ್ಟೆಷ್ಟು ದಂಡ ಸಂಗ್ರಹ?

(Woman from Kerala was allegedly gang-raped and brutalised by a group of men in Palani Tamil Nadu)

Published On - 4:05 pm, Mon, 12 July 21

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ