AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶ: ಹನಿಮೂನ್​​​ಗೆ ಗೋವಾ ಬದಲು ಅಯೋಧ್ಯೆಗೆ ಕರೆದೊಯ್ದ ಪತಿ; ವಿಚ್ಛೇದನ ಕೋರಿದ ಪತ್ನಿ

ಫ್ರೀ ಪ್ರೆಸ್ ಜರ್ನಲ್‌ನ ವರದಿಯ ಪ್ರಕಾರ, ದಂಪತಿ ತಮ್ಮ ಪ್ರವಾಸದಿಂದ ಹಿಂದಿರುಗಿದ 10 ದಿನಗಳ ನಂತರ, ಜನವರಿ 19 ರಂದು ಭೋಪಾಲ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.. ತನ್ನ ಪತಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದಾರೆ ಎಂದು ಮಹಿಳೆ ವಿಚ್ಛೇದನ ಅರ್ಜಿಯಲ್ಲಿ ತಿಳಿಸಿದ್ದಾರೆ. ಆದರೆ ಅಯೋಧ್ಯೆಯನ್ನೇ ಹನಿಮೂನ್​​ಗಾಗಿ ಆಯ್ಕೆ ಮಾಡಿದ್ದೇಕೆ? ಮಹಿಳೆ ಕೊಟ್ಟ ಕಾರಣ ಈ ರೀತಿ ಇದೆ.

ಮಧ್ಯ ಪ್ರದೇಶ: ಹನಿಮೂನ್​​​ಗೆ ಗೋವಾ ಬದಲು ಅಯೋಧ್ಯೆಗೆ ಕರೆದೊಯ್ದ ಪತಿ; ವಿಚ್ಛೇದನ ಕೋರಿದ ಪತ್ನಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jan 25, 2024 | 2:06 PM

Share

ದೆಹಲಿ ಜನವರಿ 25: ಮಧ್ಯಪ್ರದೇಶದ (Madhya pradesh) ಮಹಿಳೆಯೊಬ್ಬರು ವಿವಾಹವಾದ ಐದು ತಿಂಗಳ ನಂತರ ಪತಿಯಿಂದ ವಿಚ್ಛೇದನ (Divorce) ಕೋರಿದ್ದಾರೆ. ಈ ವಿಚ್ಛೇದನಕ್ಕೆ ಕಾರಣ ಆಕೆಯ ಪತಿ ಹನಿಮೂನ್​​ಗಾಗಿ ಅಯೋಧ್ಯೆಗೆ (Ayodhya)ಕರೆದೊಯ್ದಿದ್ದು. ಮಹಿಳೆಯ ಪ್ರಕಾರ ಆಕೆಯ ಪತಿ ಹನಿಮೂನ್​​ಗೆ ಗೋವಾ(Goa) ಹೋಗುವುದಾಗಿ ಭರವಸೆ ನೀಡಿದ್ದರು. ಆದರೆ ಆ ಪ್ಲಾನ್ ಬದಲಿಸಿ ಆಕೆಯನ್ನ ಅಯೋಧ್ಯೆ, ವಾರಣಾಸಿಗೆ ಕರೆದೊಯ್ದಿದ್ದಾರೆ.

ಫ್ರೀ ಪ್ರೆಸ್ ಜರ್ನಲ್‌ನ ವರದಿಯ ಪ್ರಕಾರ, ದಂಪತಿ ತಮ್ಮ ಪ್ರವಾಸದಿಂದ ಹಿಂದಿರುಗಿದ 10 ದಿನಗಳ ನಂತರ, ಜನವರಿ 19 ರಂದು ಭೋಪಾಲ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಪತಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದಾರೆ ಎಂದು ಮಹಿಳೆ ವಿಚ್ಛೇದನ ಅರ್ಜಿಯಲ್ಲಿ ತಿಳಿಸಿದ್ದಾರೆ. ಆಕೆಯೂ ದುಡಿಯುವ ಮಹಿಳೆ, ಚೆನ್ನಾಗಿ ಸಂಪಾದಿಸುತ್ತಾಳೆ. ಹೀಗಿರುವಾಗ ಹನಿಮೂನ್​​ಗೆ ವಿದೇಶಕ್ಕೆ ಹೋಗುವುದು ಅವರಿಗೆ ದೊಡ್ಡ ವಿಷಯವಾಗಿರಲಿಲ್ಲ.

ಯಾವುದೇ ಹಣಕಾಸಿನ ತೊಂದರೆ ಇಲ್ಲದಿದ್ದರೂ, ಮಹಿಳೆಯ ಪತಿ ಅವಳನ್ನು ವಿದೇಶಕ್ಕೆ ಕರೆದೊಯ್ಯಲು ನಿರಾಕರಿಸಿದ್ದು, ಭಾರತದಲ್ಲಿಯೇ ಒಂದು ಸ್ಥಳಕ್ಕೆ ಭೇಟಿ ನೀಡುವಂತೆ ಒತ್ತಾಯಿಸುತ್ತಿದ್ದ. ತಮ್ಮ ಹೆತ್ತವರನ್ನು ನೋಡಿಕೊಳ್ಳಬೇಕು ಎಂದು ಆತ ಹೇಳಿದ್ದ. ನಂತರ ಈ ದಂಪತಿ ತಮ್ಮ ಹನಿಮೂನ್‌ಗಾಗಿ ಗೋವಾ ಅಥವಾ ದಕ್ಷಿಣ ಭಾರತಕ್ಕೆ ಭೇಟಿ ನೀಡುವ ವಿಷಯದಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿದ್ದರು.

ಆದಾಗ್ಯೂ, ಆತ ತನ್ನ ಹೆಂಡತಿಗೆ ಹೇಳದೆಯೇ ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದು ಬದಲಾದ ಪ್ರಯಾಣದ ಯೋಜನೆಗಳ ಬಗ್ಗೆ ಪತ್ನಿಗೆ ಒಂದು ದಿನದ ಮುಂಚೆ ತಿಳಿಸಿದ್ದರು. ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದ ಮೊದಲು ತಮ್ಮ ತಾಯಿ ನಗರಕ್ಕೆ ಭೇಟಿ ನೀಡಲು ಬಯಸಿದ್ದರಿಂದ ನಾವು ಅಯೋಧ್ಯೆಗೆ ಹೋಗುತ್ತಿದ್ದೇವೆ ಎಂದು ಹೇಳಿ ಇವರು ಪ್ರವಾಸ ಹೊರಟಿದ್ದರು.

ಆ ಸಮಯದಲ್ಲಿ ಪತ್ನಿ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಯಾವುದೇ ತಕರಾರು ಮಾಡದೆ ಗಂಡನ ಜತೆ ಹೊರಟಿದ್ದರು. ಆದರೆ, ಯಾತ್ರಾ ಸ್ಥಳಗಳಿಂದ ಹಿಂತಿರುಗಿದ ಕೂಡಲೇ ಆಕೆ ತನ್ನ ಪತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದನ್ನೂ ಓದಿರಾಮನ ವಿಗ್ರಹ ಅರ್ಪಿಸಿ ಅಯೋಧ್ಯೆಯಿಂದ ಬೆಂಗಳೂರಿಗೆ ಬಂದ ಅರುಣ್ ಯೋಗಿರಾಜ್​ಗೆ ಭವ್ಯ ಸ್ವಾಗತ

ತನ್ನ ಪತಿ ತನ್ನ ಕುಟುಂಬ ಸದಸ್ಯರಿಗೆ ತನಗಿಂತ ಹೆಚ್ಚು ಕಾಳಜಿ ತೋರುತ್ತಿದ್ದಾರೆ ಎಂದು ಆಕೆ ಹೇಳಿಕೆಯಲ್ಲಿ ಹೇಳಿಕೊಂಡಿದ್ದಾಳೆ. ಇದೇ ವೇಳೆ ಪತ್ನಿ ಸುಮ್ಮನೆ ಗಲಾಟೆ ಮಾಡುತ್ತಿದ್ದಾಳೆ ಎಂದು ಪತಿ ದೂರಿದ್ದಾರೆ. ಸದ್ಯ ದಂಪತಿಗೆ ಭೋಪಾಲ್ ಕೌಟುಂಬಿಕ ನ್ಯಾಯಾಲಯದಲ್ಲಿ ಕೌನ್ಸೆಲಿಂಗ್ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ