Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು

Crime News: ನನ್ನ ತಲೆಗೆ ಬಂದೂಕು ಹಿಡಿದು, ಇಬ್ಬರು ಅತ್ಯಾಚಾರ ಮಾಡಿದರು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ. 

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Mar 20, 2022 | 12:55 PM

ರಾಜಸ್ಥಾನದಲ್ಲಿ (Rajasthan Crime News) 26ವರ್ಷದ ದಲಿತ ಮಹಿಳೆಯನ್ನು ಆಕೆಯ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಧೋಲ್​​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಬಂದೂಕಿನ ಗುರಿಯಿಟ್ಟು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಕಾಂಚನ್​​ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಗಳವಾರ ಸಂಜೆ 6ಗಂಟೆಯ ಹೊತ್ತಿಗೆ ನಾನು ಹೊಲದಿಂದ ನನ್ನ ಪತಿ ಮತ್ತು ಮಕ್ಕಳೊಂದಿಗೆ ವಾಪಸ್ ಹೊರಟಿದ್ದೆ. ಈ ವೇಳೆ ಆರು ಮಂದಿ ನಮ್ಮನ್ನು ತಡೆದರು. ಮೊದಲು ನನ್ನ ಪತಿಗೆ ಹೊಡೆದರು. ಪಿಸ್ತೂಲ್​​ನಿಂದಲೂ ಏಟು ಕೊಟ್ಟರು. ಆತ ತನ್ನ ಜೀವರಕ್ಷಣೆಗಾಗಿ ಓಡಿ ಹೋದ. ನಂತರ ನನಗೂ ಪಿಸ್ತೂಲ್​ ತೋರಿಸಿ ಕೊಲೆ ಮಾಡುವುದಾಗಿ ಹೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇವರೆಲ್ಲ ನಮ್ಮ ಹಳ್ಳಿಯ ಅಕ್ಕಪಕ್ಕದವರೇ ಆಗಿದ್ದಾರೆ ಎಂದೂ ಹೇಳಿದ್ದಾರೆ. 

ಲಾಲು, ಧನ್ ಸಿಂಗ್​, ವಿಪಿನ್​ ಮೋಹಿತ್​, ಸಚಿನ್​ ಮತ್ತು ಲೋಕೇಂದ್ರ ಸಿಂಗ್ ಠಾಕೂರ್​ ಎಂಬುವರು ಸೇರಿ ತನ್ನ ಪತಿ ಮತ್ತು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಲಾಲು ಮತ್ತು ಧನ್​ಸಿಂಗ್​ ನನ್ನ ಮೇಲೆ ರೇಪ್​ ಮಾಡಿದ್ದಾರೆ. ಈ ವೇಳೆ ನನ್ನ ತಲೆಗೆ ಬಂದೂಕು ಹಿಡಿಯಲಾಗಿತ್ತು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.  ಪ್ರಕರಣದ ಬಗ್ಗೆ ಧೋಲ್​​ಪುರ ವೃತ್ತ ನಿರೀಕ್ಷಕ ಅಧಿಕಾರಿ ವಿಜಯ್​ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬರಬೇಕು. ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮಹಿಳೆ ಆರೋಪ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದು ಭೂಮಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬ ಬಲವಾದ ಅನುಮಾನವಿದೆ. ಈ ಮಹಿಳೆಯ ಪತಿ ಮತ್ತು ಆರೋಪಿಗಳ ಮಧ್ಯೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಸಿಟ್ಟಿನಲ್ಲಿ ಆರೋಪಿಗಳು ಮಹಿಳೆಯನ್ನು ಟಾರ್ಗೆಟ್​ ಮಾಡಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆಯಾದ ವಿನಃ ಸ್ಪಷ್ಟವಾಗಿ ಹೇಳಲಾಗದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ