AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು

Crime News: ನನ್ನ ತಲೆಗೆ ಬಂದೂಕು ಹಿಡಿದು, ಇಬ್ಬರು ಅತ್ಯಾಚಾರ ಮಾಡಿದರು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ. 

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 20, 2022 | 12:55 PM

Share

ರಾಜಸ್ಥಾನದಲ್ಲಿ (Rajasthan Crime News) 26ವರ್ಷದ ದಲಿತ ಮಹಿಳೆಯನ್ನು ಆಕೆಯ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಧೋಲ್​​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಬಂದೂಕಿನ ಗುರಿಯಿಟ್ಟು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಕಾಂಚನ್​​ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಗಳವಾರ ಸಂಜೆ 6ಗಂಟೆಯ ಹೊತ್ತಿಗೆ ನಾನು ಹೊಲದಿಂದ ನನ್ನ ಪತಿ ಮತ್ತು ಮಕ್ಕಳೊಂದಿಗೆ ವಾಪಸ್ ಹೊರಟಿದ್ದೆ. ಈ ವೇಳೆ ಆರು ಮಂದಿ ನಮ್ಮನ್ನು ತಡೆದರು. ಮೊದಲು ನನ್ನ ಪತಿಗೆ ಹೊಡೆದರು. ಪಿಸ್ತೂಲ್​​ನಿಂದಲೂ ಏಟು ಕೊಟ್ಟರು. ಆತ ತನ್ನ ಜೀವರಕ್ಷಣೆಗಾಗಿ ಓಡಿ ಹೋದ. ನಂತರ ನನಗೂ ಪಿಸ್ತೂಲ್​ ತೋರಿಸಿ ಕೊಲೆ ಮಾಡುವುದಾಗಿ ಹೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇವರೆಲ್ಲ ನಮ್ಮ ಹಳ್ಳಿಯ ಅಕ್ಕಪಕ್ಕದವರೇ ಆಗಿದ್ದಾರೆ ಎಂದೂ ಹೇಳಿದ್ದಾರೆ. 

ಲಾಲು, ಧನ್ ಸಿಂಗ್​, ವಿಪಿನ್​ ಮೋಹಿತ್​, ಸಚಿನ್​ ಮತ್ತು ಲೋಕೇಂದ್ರ ಸಿಂಗ್ ಠಾಕೂರ್​ ಎಂಬುವರು ಸೇರಿ ತನ್ನ ಪತಿ ಮತ್ತು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಲಾಲು ಮತ್ತು ಧನ್​ಸಿಂಗ್​ ನನ್ನ ಮೇಲೆ ರೇಪ್​ ಮಾಡಿದ್ದಾರೆ. ಈ ವೇಳೆ ನನ್ನ ತಲೆಗೆ ಬಂದೂಕು ಹಿಡಿಯಲಾಗಿತ್ತು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.  ಪ್ರಕರಣದ ಬಗ್ಗೆ ಧೋಲ್​​ಪುರ ವೃತ್ತ ನಿರೀಕ್ಷಕ ಅಧಿಕಾರಿ ವಿಜಯ್​ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬರಬೇಕು. ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮಹಿಳೆ ಆರೋಪ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದು ಭೂಮಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬ ಬಲವಾದ ಅನುಮಾನವಿದೆ. ಈ ಮಹಿಳೆಯ ಪತಿ ಮತ್ತು ಆರೋಪಿಗಳ ಮಧ್ಯೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಸಿಟ್ಟಿನಲ್ಲಿ ಆರೋಪಿಗಳು ಮಹಿಳೆಯನ್ನು ಟಾರ್ಗೆಟ್​ ಮಾಡಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆಯಾದ ವಿನಃ ಸ್ಪಷ್ಟವಾಗಿ ಹೇಳಲಾಗದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ