AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು

Crime News: ನನ್ನ ತಲೆಗೆ ಬಂದೂಕು ಹಿಡಿದು, ಇಬ್ಬರು ಅತ್ಯಾಚಾರ ಮಾಡಿದರು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ. 

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 20, 2022 | 12:55 PM

Share

ರಾಜಸ್ಥಾನದಲ್ಲಿ (Rajasthan Crime News) 26ವರ್ಷದ ದಲಿತ ಮಹಿಳೆಯನ್ನು ಆಕೆಯ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಧೋಲ್​​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಬಂದೂಕಿನ ಗುರಿಯಿಟ್ಟು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಕಾಂಚನ್​​ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಗಳವಾರ ಸಂಜೆ 6ಗಂಟೆಯ ಹೊತ್ತಿಗೆ ನಾನು ಹೊಲದಿಂದ ನನ್ನ ಪತಿ ಮತ್ತು ಮಕ್ಕಳೊಂದಿಗೆ ವಾಪಸ್ ಹೊರಟಿದ್ದೆ. ಈ ವೇಳೆ ಆರು ಮಂದಿ ನಮ್ಮನ್ನು ತಡೆದರು. ಮೊದಲು ನನ್ನ ಪತಿಗೆ ಹೊಡೆದರು. ಪಿಸ್ತೂಲ್​​ನಿಂದಲೂ ಏಟು ಕೊಟ್ಟರು. ಆತ ತನ್ನ ಜೀವರಕ್ಷಣೆಗಾಗಿ ಓಡಿ ಹೋದ. ನಂತರ ನನಗೂ ಪಿಸ್ತೂಲ್​ ತೋರಿಸಿ ಕೊಲೆ ಮಾಡುವುದಾಗಿ ಹೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇವರೆಲ್ಲ ನಮ್ಮ ಹಳ್ಳಿಯ ಅಕ್ಕಪಕ್ಕದವರೇ ಆಗಿದ್ದಾರೆ ಎಂದೂ ಹೇಳಿದ್ದಾರೆ. 

ಲಾಲು, ಧನ್ ಸಿಂಗ್​, ವಿಪಿನ್​ ಮೋಹಿತ್​, ಸಚಿನ್​ ಮತ್ತು ಲೋಕೇಂದ್ರ ಸಿಂಗ್ ಠಾಕೂರ್​ ಎಂಬುವರು ಸೇರಿ ತನ್ನ ಪತಿ ಮತ್ತು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಲಾಲು ಮತ್ತು ಧನ್​ಸಿಂಗ್​ ನನ್ನ ಮೇಲೆ ರೇಪ್​ ಮಾಡಿದ್ದಾರೆ. ಈ ವೇಳೆ ನನ್ನ ತಲೆಗೆ ಬಂದೂಕು ಹಿಡಿಯಲಾಗಿತ್ತು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.  ಪ್ರಕರಣದ ಬಗ್ಗೆ ಧೋಲ್​​ಪುರ ವೃತ್ತ ನಿರೀಕ್ಷಕ ಅಧಿಕಾರಿ ವಿಜಯ್​ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬರಬೇಕು. ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮಹಿಳೆ ಆರೋಪ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದು ಭೂಮಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬ ಬಲವಾದ ಅನುಮಾನವಿದೆ. ಈ ಮಹಿಳೆಯ ಪತಿ ಮತ್ತು ಆರೋಪಿಗಳ ಮಧ್ಯೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಸಿಟ್ಟಿನಲ್ಲಿ ಆರೋಪಿಗಳು ಮಹಿಳೆಯನ್ನು ಟಾರ್ಗೆಟ್​ ಮಾಡಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆಯಾದ ವಿನಃ ಸ್ಪಷ್ಟವಾಗಿ ಹೇಳಲಾಗದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ