AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು

Crime News: ನನ್ನ ತಲೆಗೆ ಬಂದೂಕು ಹಿಡಿದು, ಇಬ್ಬರು ಅತ್ಯಾಚಾರ ಮಾಡಿದರು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ. 

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 20, 2022 | 12:55 PM

Share

ರಾಜಸ್ಥಾನದಲ್ಲಿ (Rajasthan Crime News) 26ವರ್ಷದ ದಲಿತ ಮಹಿಳೆಯನ್ನು ಆಕೆಯ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಧೋಲ್​​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಬಂದೂಕಿನ ಗುರಿಯಿಟ್ಟು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಕಾಂಚನ್​​ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಗಳವಾರ ಸಂಜೆ 6ಗಂಟೆಯ ಹೊತ್ತಿಗೆ ನಾನು ಹೊಲದಿಂದ ನನ್ನ ಪತಿ ಮತ್ತು ಮಕ್ಕಳೊಂದಿಗೆ ವಾಪಸ್ ಹೊರಟಿದ್ದೆ. ಈ ವೇಳೆ ಆರು ಮಂದಿ ನಮ್ಮನ್ನು ತಡೆದರು. ಮೊದಲು ನನ್ನ ಪತಿಗೆ ಹೊಡೆದರು. ಪಿಸ್ತೂಲ್​​ನಿಂದಲೂ ಏಟು ಕೊಟ್ಟರು. ಆತ ತನ್ನ ಜೀವರಕ್ಷಣೆಗಾಗಿ ಓಡಿ ಹೋದ. ನಂತರ ನನಗೂ ಪಿಸ್ತೂಲ್​ ತೋರಿಸಿ ಕೊಲೆ ಮಾಡುವುದಾಗಿ ಹೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇವರೆಲ್ಲ ನಮ್ಮ ಹಳ್ಳಿಯ ಅಕ್ಕಪಕ್ಕದವರೇ ಆಗಿದ್ದಾರೆ ಎಂದೂ ಹೇಳಿದ್ದಾರೆ. 

ಲಾಲು, ಧನ್ ಸಿಂಗ್​, ವಿಪಿನ್​ ಮೋಹಿತ್​, ಸಚಿನ್​ ಮತ್ತು ಲೋಕೇಂದ್ರ ಸಿಂಗ್ ಠಾಕೂರ್​ ಎಂಬುವರು ಸೇರಿ ತನ್ನ ಪತಿ ಮತ್ತು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಲಾಲು ಮತ್ತು ಧನ್​ಸಿಂಗ್​ ನನ್ನ ಮೇಲೆ ರೇಪ್​ ಮಾಡಿದ್ದಾರೆ. ಈ ವೇಳೆ ನನ್ನ ತಲೆಗೆ ಬಂದೂಕು ಹಿಡಿಯಲಾಗಿತ್ತು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.  ಪ್ರಕರಣದ ಬಗ್ಗೆ ಧೋಲ್​​ಪುರ ವೃತ್ತ ನಿರೀಕ್ಷಕ ಅಧಿಕಾರಿ ವಿಜಯ್​ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬರಬೇಕು. ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮಹಿಳೆ ಆರೋಪ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದು ಭೂಮಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬ ಬಲವಾದ ಅನುಮಾನವಿದೆ. ಈ ಮಹಿಳೆಯ ಪತಿ ಮತ್ತು ಆರೋಪಿಗಳ ಮಧ್ಯೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಸಿಟ್ಟಿನಲ್ಲಿ ಆರೋಪಿಗಳು ಮಹಿಳೆಯನ್ನು ಟಾರ್ಗೆಟ್​ ಮಾಡಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆಯಾದ ವಿನಃ ಸ್ಪಷ್ಟವಾಗಿ ಹೇಳಲಾಗದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು