AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ
ಸೈಬರ್ ಕ್ರೈಂImage Credit source: The Economic Times
ನಯನಾ ರಾಜೀವ್
|

Updated on:Oct 03, 2023 | 12:05 PM

Share

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್(Electricity Bill) ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಸೈಬರ್ ವಂಚಕ ದೂರುದಾರರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ವಿಡಿಯೋ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಸಹಾಯ ಮಾಡಲು ವಂಚಕನು ಮುಂದಾಗಿದ್ದಾನೆ. ದೂರುದಾರರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಕರು ಅನಧಿಕೃತವಾಗಿ ಡೆಬಿಟ್ ಕಾರ್ಡ್‌ನ ಪ್ರಮುಖ ವಿವರಗಳನ್ನು ಪಡೆದು ಒಟ್ಟು 1.37 ಲಕ್ಷ ರೂ. ವಂಚನೆ ಮಾಡಿದ್ದಾನೆ.

ಮತ್ತಷ್ಟು ಓದಿ: ಗ್ಯಾಸ್ ಕಂಪನಿಯ ಡೀಲರ್ ಶಿಪ್ ಸಿಗುತ್ತೆಂದು ನಂಬಿ 45 ಲಕ್ಷ ರೂ. ಕಳೆದುಕೊಂಡ ನಿವೃತ್ತ ಪ್ರಾಂಶುಪಾಲ

ಮಹಿಳೆಯ ದೂರಿನ ಆಧಾರದ ಮೇಲೆ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಇದೇ ರೀತಿ ಘಟನೆಯೊಂದು ನಡೆದಿತ್ತು, 76 ವರ್ಷದ ಉಷಾ ಎಂಬುವವರು ಕೇವಲ 4 ನಿಮಿಷಗಳಲ್ಲಿ 9.48 ಲಕ್ಷ ರೂ. ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Tue, 3 October 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ