Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ
ಸೈಬರ್ ಕ್ರೈಂImage Credit source: The Economic Times
Follow us
ನಯನಾ ರಾಜೀವ್
|

Updated on:Oct 03, 2023 | 12:05 PM

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್(Electricity Bill) ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಸೈಬರ್ ವಂಚಕ ದೂರುದಾರರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ವಿಡಿಯೋ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಸಹಾಯ ಮಾಡಲು ವಂಚಕನು ಮುಂದಾಗಿದ್ದಾನೆ. ದೂರುದಾರರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಕರು ಅನಧಿಕೃತವಾಗಿ ಡೆಬಿಟ್ ಕಾರ್ಡ್‌ನ ಪ್ರಮುಖ ವಿವರಗಳನ್ನು ಪಡೆದು ಒಟ್ಟು 1.37 ಲಕ್ಷ ರೂ. ವಂಚನೆ ಮಾಡಿದ್ದಾನೆ.

ಮತ್ತಷ್ಟು ಓದಿ: ಗ್ಯಾಸ್ ಕಂಪನಿಯ ಡೀಲರ್ ಶಿಪ್ ಸಿಗುತ್ತೆಂದು ನಂಬಿ 45 ಲಕ್ಷ ರೂ. ಕಳೆದುಕೊಂಡ ನಿವೃತ್ತ ಪ್ರಾಂಶುಪಾಲ

ಮಹಿಳೆಯ ದೂರಿನ ಆಧಾರದ ಮೇಲೆ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಇದೇ ರೀತಿ ಘಟನೆಯೊಂದು ನಡೆದಿತ್ತು, 76 ವರ್ಷದ ಉಷಾ ಎಂಬುವವರು ಕೇವಲ 4 ನಿಮಿಷಗಳಲ್ಲಿ 9.48 ಲಕ್ಷ ರೂ. ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Tue, 3 October 23

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು