AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಿನಲ್ಲಿ ಹೋಗುತ್ತಿರುವಾಗಲೇ ಕಾಣಿಸಿಕೊಂಡ ಹೆರಿಗೆ ನೋವು, ಅಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬರು ಬಸ್​ನಲ್ಲಿ ಜನ್ಮ ನೀಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಹಿಳೆ ತ್ರಿಶೂರ್​ನಿಂದ ತೊಟ್ಟಿಲ್‌ಪಾಲಮ್‌ಗೆ ಹೊರಟಿದ್ದರು, ಮಾರ್ಗಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಸ್​ ಡ್ರೈವರ್ ಬಸ್ಸನ್ನು ಮಾರ್ಗ ಬದಲಾಯಿಸಿ ಆಸ್ಪತ್ರೆ ಕಡೆಗೆ ಓಡಿಸಿದ್ದಾರೆ.

ಬಸ್ಸಿನಲ್ಲಿ ಹೋಗುತ್ತಿರುವಾಗಲೇ ಕಾಣಿಸಿಕೊಂಡ ಹೆರಿಗೆ ನೋವು, ಅಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಬಸ್Image Credit source: India Today
ನಯನಾ ರಾಜೀವ್
|

Updated on: May 30, 2024 | 7:53 AM

Share

ತುಂಬು ಗರ್ಭಿಣಿ(Pregnant)ಯೊಬ್ಬರು ತ್ರಿಶೂರ್​ನಿಂದ ಕೋಳಿಕ್ಕೋಡ್​ಗೆ ಬಸ್​ನಲ್ಲಿ ಪತಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ತೊಟ್ಟಿಲ್‌ಪಾಲಮ್‌ಗೆ ಪ್ರಯಾಣಿಸುತ್ತಿದ್ದಾಗ ನೋವು ಹೆಚ್ಚಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆರಿಗೆ ಮಾಡಿಸಲಾಗಿದೆ. ಬಸ್ ಪೆರಮಂಗಲಂ ಮೂಲಕ ಹಾದು ಹೋಗುವಾಗ ಮಹಿಳೆಗೆ ಹೆರಿಗೆ ನೋವು ಜೋರಾಗಿತ್ತು.

ಬಸ್ ತ್ರಿಶೂರ್ ಜಿಲ್ಲೆಯ ಪೆರಮಂಗಲಂ ದಾಟುತ್ತಿದ್ದಂತೆ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ತ್ವರಿತವಾಗಿ ಯೋಚಿಸಿದ ಬಸ್ ಚಾಲಕ ತಕ್ಷಣ ಮಾರ್ಗವನ್ನು ಬದಲಿಸಿ ಅಮಲಾ ಆಸ್ಪತ್ರೆಯ ಕಡೆಗೆ ಹೊರಟರು. ಕೂಡಲೇ ಹೆರಿಗೆ ಬಗ್ಗೆ ಬಸ್ ಸಿಬ್ಬಂದಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ.

ಅಷ್ಟೊತ್ತಿಗಾಗಲೇ ಮಹಿಳೆ ಹೆರಿಗೆಯ ಹಂತದಲ್ಲಿದ್ದಳು. ಆಸ್ಪತ್ರೆಯನ್ನು ತಲುಪಿದ ನಂತರ, ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಲಾಯಿತು, ವೈದ್ಯರು ಮತ್ತು ದಾದಿಯರು ತಕ್ಷಣವೇ ಬಸ್​ ಏರಿದ್ದರು.

ಮತ್ತಷ್ಟು ಓದಿ: ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ, ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಶ್ಲಾಘನೆ

ಅಮಲಾ ಆಸ್ಪತ್ರೆಯ ಬಸ್ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರ ಸಕಾಲಿಕ ನೆರವಿನಿಂದ ಅವರು ಬಸ್‌ನೊಳಗೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಹಿಳೆಗೆ ಅಗತ್ಯ ವೈದ್ಯಕೀಯ ನೆರವು ಸಿಗುವಂತೆ ಮತ್ತು ಆ ಸಂದರ್ಭದಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಲು ಸಾಧ್ಯವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿ ಮತ್ತು ವೈದ್ಯಕೀಯ ತಂಡವು ಕೆಲಸ ಮಾಡುವುದುದನ್ನು ವಿಡಿಯೋ ತೋರಿಸಿದೆ. ತಾಯಿ ಮತ್ತು ಅವರ ನವಜಾತ ಶಿಶುವನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?