AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್ ಇನ್ ಸಂಗಾತಿಯ ಭಯಪಡಿಸಲು ರೈಲ್ವೆ ಹಳಿ ಮೇಲೆ ಹಾರಿದ ಮಹಿಳೆ, ರೈಲು ಹರಿದು ಸಾವು

ಮಹಿಳೆಯೊಬ್ಬಳು ಲಿವ್​-ಇನ್​ ಸಂಗಾತಿ ಜತೆ ಜಗಳವಾಡಿ ಆತನನ್ನು ಭಯ ಪಡಿಸಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ಲಿವ್ ಇನ್ ಸಂಗಾತಿಯ ಭಯಪಡಿಸಲು ರೈಲ್ವೆ ಹಳಿ ಮೇಲೆ ಹಾರಿದ ಮಹಿಳೆ, ರೈಲು ಹರಿದು ಸಾವು
ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: May 29, 2024 | 9:50 AM

Share

ಮಹಿಳೆಯೊಬ್ಬರು ಲಿವ್​-ಇನ್ ಸಂಗಾತಿ(Live In Partner)ಯನ್ನು ಭಯಪಡಿಸಲು ಹೋಗಿ ಪ್ರಾಣಬಿಟ್ಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಆಗ್ರಾದ ರಾಜಾ ಕಿ ಮಂಡಿ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ರಾಣಿ ಎಂಬ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರ ರಾತ್ರಿ 11:08 ರ ಸುಮಾರಿಗೆ ಈ ಘಟನೆ ನಡೆದಿದ್ದು, ರಾಣಿ ತನ್ನ ಲೈವ್-ಇನ್ ಸಂಗಾತಿ ಕಿಶೋರ್ ಎಂಬಾತನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದರು, ನಂತರ ಅವರನ್ನು ಹೆದರಿಸಲು ರೈಲ್ವೆ ಹಳಿಗೆ ಹಾರಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ವರದಿ ಪ್ರಕಾರ, ರಾಣಿ ಮತ್ತು ಕಿಶೋರ್ ಲೋಹಮಂಡಿ ಪ್ರದೇಶದ ಬರ್ಫ್ ವಾಲಿ ಗಲಿಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಕಿಶೋರ್ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕುಡಿದ ಸ್ಥಿತಿಯಲ್ಲಿ ಮನೆಗೆ ಮರಳಿದ್ದರು.

ಮಹಿಳೆ ಅವರ ಕುಡಿಯುವ ಚಟದ ಬಗ್ಗೆ ಜಗಳ ಶುರು ಮಾಡಿದ್ದರು. ರಾಣಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು. ಠಾಣೆ ತಲುಪಿದ ನಂತರ ಇಬ್ಬರೂ ಪ್ಲಾಟ್ ಫಾರಂ ನಂಬರ್ 2ರಲ್ಲಿ ಕುರ್ಚಿಗಳ ಮೇಲೆ ಕುಳಿತು ಮಾತಿನ ಚಕಮಕಿ ಮುಂದುವರೆಸಿದರು. ಕಿಶೋರ್​ನನ್ನು ಹೆದರಿಸುವ ಉದ್ದೇಶದಿಂದ ರಾಣಿ ಟ್ರ್ಯಾಕ್​ಗಳ ಮೇಲೆ ಹಾರಿದ್ದಾರೆ, ಆದರೆ ಅದೇ ಸಮಯದಲ್ಲಿ ರೈಲು ಬಂದು ಆಕೆಯ ಮೇಲೆ ಹರಿದಿದೆ. ಕೂಡಲೇ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ:ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ, ಕುಟುಂಬದಿಂದಲೇ ಕೊಲೆಗೆ ಯತ್ನ; ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿತು ಜೀವ

ತಕ್ಷಣ ಕೇರಳ ಎಕ್ಸ್​ ಪ್ರೆಸ್​ ರೈಲು ಬಂದಿದೆ, ಆದರೆ ಆ ಸಮಯದಲ್ಲಿ ಪ್ಲಾಟ್​ಫಾರಂಗೆ ಹತ್ತಲು ಸಾಧ್ಯವಾಗಿಲ್ಲ. ಪ್ಲಾಟ್​ಫಾರಂ ಹಾಗೂ ರೈಲಿನಡಿ ಸಿಲುಕಿದ್ದರು. ದುರದೃಷ್ಟವಶಾತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಣಿ ಕಿಶೋರ್ ಜೊತೆ ಒಂದು ವರ್ಷದಿಂದ ಸಂಬಂಧ ಹೊಂದಿದ್ದಳು.

ಅಪಘಾತದ ಬಗ್ಗೆ ರಾಣಿಯ ತಂದೆ ವಿನೋದ್ ಅವರಿಗೆ ಮಾಹಿತಿ ನೀಡಲಾಯಿತು. ರಾಣಿಗೆ ಹಿಂದಿನ ಮದುವೆಯಿಂದ ಮೂವರು ಗಂಡು ಮಕ್ಕಳಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಆಕೆ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು, ಹಿರಿಯ ಮಗ ಪ್ರತ್ಯೇಕವಾಗಿದ್ದ. ರಾಣಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಬಹದ್ದೂರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ