AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

Salem Gas Cylinder Blast: ಅಗ್ನಿಶಾಮಕದಳದ ಸಿಬ್ಬಂದಿ ಹತ್ತುವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ ವಿಡಿಯೋ ಕೂಡ ವೈರಲ್ ಆಗಿದೆ.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ
ಸ್ಫೋಟಕ್ಕೆ ಛಿದ್ರಗೊಂಡ ಮನೆಗಳು, ರಕ್ಷಣಾ ಕಾರ್ಯಾಚರಣೆ
TV9 Web
| Edited By: |

Updated on:Nov 23, 2021 | 1:29 PM

Share

ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡ ಘಟನೆ ಸೇಲಂನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಪಾಂಡುರಂಗನ್​ ರಸ್ತೆಯಲ್ಲಿರುವ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು 80 ವರ್ಷದ ರಾಜಲಕ್ಷ್ಮೀ ಎಂಬುವರು ಮೃತಮಹಿಳೆ. ಇವರು ಚಹಾ ಮಾಡಲೆಂದು ಗ್ಯಾಸ್​ ಆನ್​ ಮಾಡುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಸ್ಫೋಟವುಂಟಾಗಿದೆ. ಸ್ಥಳಕ್ಕೆ ಶೇವಾಪೇಟ್​ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹಾಗೇ, ಅಗ್ನಿಶಾಮಕದಳದ ಸಿಬ್ಬಂದಿಯೂ ಧಾವಿಸಿದ್ದರು. 

ಸಿಲಿಂಡರ್ ಸ್ಫೋಟಗೊಂದ ಮನೆಯಲ್ಲಿದ್ದ ಗೋಪಿ (52) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಶೇ.90ರಷ್ಟು ಗಾಯಗೊಂಡಿದ್ದು ಬದುಕುವ ಸಾಧ್ಯತೆ ತುಂಬ ಕಡಿಮೆಯಿದೆ ಎಂದು ವೈದ್ಯರು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಸುತ್ತಲಿದ್ದ ನಾಲ್ಕು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ವೆಂಕಟರಾಜನ್​, ಇಂದಿರಾಣಿ, ಮೋಹನ್​ ರಾಜ್​, ನಾಗಸುತ, ಗೋಪಾಲ್​, ಧನಲಕ್ಷ್ಮೀ, ಸುದರ್ಶನ್​, ಗಣೇಶನ್​, ಉಷಾರಾಣಿ, ಲೋಕೇಶ್​ ಗಾಯಗೊಂಡವರು.

ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ

Published On - 1:19 pm, Tue, 23 November 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ