AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

Salem Gas Cylinder Blast: ಅಗ್ನಿಶಾಮಕದಳದ ಸಿಬ್ಬಂದಿ ಹತ್ತುವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ ವಿಡಿಯೋ ಕೂಡ ವೈರಲ್ ಆಗಿದೆ.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ
ಸ್ಫೋಟಕ್ಕೆ ಛಿದ್ರಗೊಂಡ ಮನೆಗಳು, ರಕ್ಷಣಾ ಕಾರ್ಯಾಚರಣೆ
TV9 Web
| Edited By: |

Updated on:Nov 23, 2021 | 1:29 PM

Share

ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡ ಘಟನೆ ಸೇಲಂನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಪಾಂಡುರಂಗನ್​ ರಸ್ತೆಯಲ್ಲಿರುವ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು 80 ವರ್ಷದ ರಾಜಲಕ್ಷ್ಮೀ ಎಂಬುವರು ಮೃತಮಹಿಳೆ. ಇವರು ಚಹಾ ಮಾಡಲೆಂದು ಗ್ಯಾಸ್​ ಆನ್​ ಮಾಡುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಸ್ಫೋಟವುಂಟಾಗಿದೆ. ಸ್ಥಳಕ್ಕೆ ಶೇವಾಪೇಟ್​ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹಾಗೇ, ಅಗ್ನಿಶಾಮಕದಳದ ಸಿಬ್ಬಂದಿಯೂ ಧಾವಿಸಿದ್ದರು. 

ಸಿಲಿಂಡರ್ ಸ್ಫೋಟಗೊಂದ ಮನೆಯಲ್ಲಿದ್ದ ಗೋಪಿ (52) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಶೇ.90ರಷ್ಟು ಗಾಯಗೊಂಡಿದ್ದು ಬದುಕುವ ಸಾಧ್ಯತೆ ತುಂಬ ಕಡಿಮೆಯಿದೆ ಎಂದು ವೈದ್ಯರು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಸುತ್ತಲಿದ್ದ ನಾಲ್ಕು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ವೆಂಕಟರಾಜನ್​, ಇಂದಿರಾಣಿ, ಮೋಹನ್​ ರಾಜ್​, ನಾಗಸುತ, ಗೋಪಾಲ್​, ಧನಲಕ್ಷ್ಮೀ, ಸುದರ್ಶನ್​, ಗಣೇಶನ್​, ಉಷಾರಾಣಿ, ಲೋಕೇಶ್​ ಗಾಯಗೊಂಡವರು.

ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ

Published On - 1:19 pm, Tue, 23 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ