AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

Salem Gas Cylinder Blast: ಅಗ್ನಿಶಾಮಕದಳದ ಸಿಬ್ಬಂದಿ ಹತ್ತುವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ ವಿಡಿಯೋ ಕೂಡ ವೈರಲ್ ಆಗಿದೆ.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ
ಸ್ಫೋಟಕ್ಕೆ ಛಿದ್ರಗೊಂಡ ಮನೆಗಳು, ರಕ್ಷಣಾ ಕಾರ್ಯಾಚರಣೆ
TV9 Web
| Updated By: Lakshmi Hegde|

Updated on:Nov 23, 2021 | 1:29 PM

Share

ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡ ಘಟನೆ ಸೇಲಂನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಪಾಂಡುರಂಗನ್​ ರಸ್ತೆಯಲ್ಲಿರುವ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು 80 ವರ್ಷದ ರಾಜಲಕ್ಷ್ಮೀ ಎಂಬುವರು ಮೃತಮಹಿಳೆ. ಇವರು ಚಹಾ ಮಾಡಲೆಂದು ಗ್ಯಾಸ್​ ಆನ್​ ಮಾಡುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಸ್ಫೋಟವುಂಟಾಗಿದೆ. ಸ್ಥಳಕ್ಕೆ ಶೇವಾಪೇಟ್​ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹಾಗೇ, ಅಗ್ನಿಶಾಮಕದಳದ ಸಿಬ್ಬಂದಿಯೂ ಧಾವಿಸಿದ್ದರು. 

ಸಿಲಿಂಡರ್ ಸ್ಫೋಟಗೊಂದ ಮನೆಯಲ್ಲಿದ್ದ ಗೋಪಿ (52) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಶೇ.90ರಷ್ಟು ಗಾಯಗೊಂಡಿದ್ದು ಬದುಕುವ ಸಾಧ್ಯತೆ ತುಂಬ ಕಡಿಮೆಯಿದೆ ಎಂದು ವೈದ್ಯರು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಸುತ್ತಲಿದ್ದ ನಾಲ್ಕು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ವೆಂಕಟರಾಜನ್​, ಇಂದಿರಾಣಿ, ಮೋಹನ್​ ರಾಜ್​, ನಾಗಸುತ, ಗೋಪಾಲ್​, ಧನಲಕ್ಷ್ಮೀ, ಸುದರ್ಶನ್​, ಗಣೇಶನ್​, ಉಷಾರಾಣಿ, ಲೋಕೇಶ್​ ಗಾಯಗೊಂಡವರು.

ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ

Published On - 1:19 pm, Tue, 23 November 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ