AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Jan 02, 2022 | 7:28 PM

Share

ತಿರುಚ್ಚಿ: ಅತ್ತೆಯನ್ನು ಕೊಂದು ಬೆಂಕಿ ಹಚ್ಚಿದ ಸೊಸೆ, ನಂತರ ಇದೊಂದು ಬೆಂಕಿ ದುರಂತದಿಂದ ಆದ ಸಾವು ಎಂಬಂತೆ ಬಿಂಬಿಸಲು ಪ್ರಯತ್ನಿಸಿದ್ದಾಳೆ. ತಮಿಳುನಾಡಿನ ವಿಶ್ವಾಸ್​ನಗರದಲ್ಲಿ ಘಟನೆ ನಡೆದಿದೆ.   ಇದರಲ್ಲಿ ಆರೋಪಿ ಎನ್ನಿಸಿರುವ ಸೊಸೆ ರೇಷ್ಮಾ ವಯಸ್ಸು 27. ಮೃತ ಅತ್ತೆಯ ಹೆಸರು ನವೀನಾ (46). ಇವರ ತಾಯಿ ಎಸ್​.ಶಕಿಂಶಾ (74) ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳು ಬೆಂಕಿಯಿಂದ ಸುಟ್ಟ ಗಾಯದಿಂದ ಸತ್ತಿದ್ದಾಳೆ. ಆದರೆ ಆಕೆಯ ತಲೆ ಮೇಲೆ ಗಾಯವಾಗಿದೆ.  ನನ್ನ ಮಗಳಿಗೆ ಹೀಗೆ ಆಗುವಾಗ ಆಕೆಯ ಸೊಸೆ ರೇಷ್ಮಾ ಮತ್ತು ಅವಳ 2ವರ್ಷದ ಮಗ ಅಲ್ಲಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದಾದ ಬಳಿಕ ಪೊಲೀಸರು ತನಿಖೆ ಶುರು ಮಾಡಿದ್ದರು.

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು. ರೇಷ್ಮಾಳನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತಾನು ಸ್ಕ್ರ್ಯೂಡ್ರೈವರ್​ನಿಂದ ಹೊಡೆದು ಅತ್ತೆಯನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅಷ್ಟೇ ಅಲ್ಲ, ನಂತರ ಆಕೆಯ ಶವಕ್ಕೆ ಸೀಮೆಎಣ್ಣೆ ಹಾಕಿ, ಬೆಂಕಿ ಹಚ್ಚಿದ್ದಾಗಿಯೂ ತಿಳಿಸಿದ್ದಾಳೆ.  ನವೀನಾ ಮೊದಲು ಅಡುಗೆ ಮನೆಯಲ್ಲಿ ನೆಲದ ಮೇಲೆ ಬಿದ್ದರು. ನಂತರ ತನ್ನನ್ನು ಎತ್ತುವಂತೆ ನನ್ನ ಬಳಿ ಕೇಳಿದಳು. ಆದರೆ ಸ್ವಲ್ಪ ತಡವಾಗುತ್ತಿದ್ದಂತೆ ನನ್ನನ್ನು ನಿಂದಿಸಲು ಪ್ರಯತ್ನ ಪಟ್ಟಳು. ಆಗ ನನಗೆ ಕೋಪ ಬಂದು, ಅಲ್ಲಿಯೇ ಇದ್ದ ಸ್ಕ್ರ್ಯೂಡ್ರೈವರ್​ನಿಂದ ಹಲವು ಬಾರಿ ಇರಿದು, ಹೊಡೆದು ಕೊಂದೆ. ನಂತರ ಅದನ್ನು ಬೆಂಕಿ ಅನಾಹುತವೆಂದು ಬಿಂಬಿಸಲು ಯತ್ನಿಸಿದೆ ಎಂದು ಒಪ್ಪಿಕೊಂಡಿದ್ದಾಳೆ.  ಸದ್ಯ ರೇಷ್ಮಾಳನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿಗಳಲ್ಲಿ ಉದ್ಯೋಗಾವಕಾಶ: 4ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ

Published On - 7:27 pm, Sun, 2 January 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!