AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 02, 2022 | 7:28 PM

Share

ತಿರುಚ್ಚಿ: ಅತ್ತೆಯನ್ನು ಕೊಂದು ಬೆಂಕಿ ಹಚ್ಚಿದ ಸೊಸೆ, ನಂತರ ಇದೊಂದು ಬೆಂಕಿ ದುರಂತದಿಂದ ಆದ ಸಾವು ಎಂಬಂತೆ ಬಿಂಬಿಸಲು ಪ್ರಯತ್ನಿಸಿದ್ದಾಳೆ. ತಮಿಳುನಾಡಿನ ವಿಶ್ವಾಸ್​ನಗರದಲ್ಲಿ ಘಟನೆ ನಡೆದಿದೆ.   ಇದರಲ್ಲಿ ಆರೋಪಿ ಎನ್ನಿಸಿರುವ ಸೊಸೆ ರೇಷ್ಮಾ ವಯಸ್ಸು 27. ಮೃತ ಅತ್ತೆಯ ಹೆಸರು ನವೀನಾ (46). ಇವರ ತಾಯಿ ಎಸ್​.ಶಕಿಂಶಾ (74) ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳು ಬೆಂಕಿಯಿಂದ ಸುಟ್ಟ ಗಾಯದಿಂದ ಸತ್ತಿದ್ದಾಳೆ. ಆದರೆ ಆಕೆಯ ತಲೆ ಮೇಲೆ ಗಾಯವಾಗಿದೆ.  ನನ್ನ ಮಗಳಿಗೆ ಹೀಗೆ ಆಗುವಾಗ ಆಕೆಯ ಸೊಸೆ ರೇಷ್ಮಾ ಮತ್ತು ಅವಳ 2ವರ್ಷದ ಮಗ ಅಲ್ಲಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದಾದ ಬಳಿಕ ಪೊಲೀಸರು ತನಿಖೆ ಶುರು ಮಾಡಿದ್ದರು.

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು. ರೇಷ್ಮಾಳನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತಾನು ಸ್ಕ್ರ್ಯೂಡ್ರೈವರ್​ನಿಂದ ಹೊಡೆದು ಅತ್ತೆಯನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅಷ್ಟೇ ಅಲ್ಲ, ನಂತರ ಆಕೆಯ ಶವಕ್ಕೆ ಸೀಮೆಎಣ್ಣೆ ಹಾಕಿ, ಬೆಂಕಿ ಹಚ್ಚಿದ್ದಾಗಿಯೂ ತಿಳಿಸಿದ್ದಾಳೆ.  ನವೀನಾ ಮೊದಲು ಅಡುಗೆ ಮನೆಯಲ್ಲಿ ನೆಲದ ಮೇಲೆ ಬಿದ್ದರು. ನಂತರ ತನ್ನನ್ನು ಎತ್ತುವಂತೆ ನನ್ನ ಬಳಿ ಕೇಳಿದಳು. ಆದರೆ ಸ್ವಲ್ಪ ತಡವಾಗುತ್ತಿದ್ದಂತೆ ನನ್ನನ್ನು ನಿಂದಿಸಲು ಪ್ರಯತ್ನ ಪಟ್ಟಳು. ಆಗ ನನಗೆ ಕೋಪ ಬಂದು, ಅಲ್ಲಿಯೇ ಇದ್ದ ಸ್ಕ್ರ್ಯೂಡ್ರೈವರ್​ನಿಂದ ಹಲವು ಬಾರಿ ಇರಿದು, ಹೊಡೆದು ಕೊಂದೆ. ನಂತರ ಅದನ್ನು ಬೆಂಕಿ ಅನಾಹುತವೆಂದು ಬಿಂಬಿಸಲು ಯತ್ನಿಸಿದೆ ಎಂದು ಒಪ್ಪಿಕೊಂಡಿದ್ದಾಳೆ.  ಸದ್ಯ ರೇಷ್ಮಾಳನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿಗಳಲ್ಲಿ ಉದ್ಯೋಗಾವಕಾಶ: 4ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ

Published On - 7:27 pm, Sun, 2 January 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್