AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು.

ನೆಲದ ಮೇಲೆ ಬಿದ್ದಿದ್ದ ಅತ್ತೆಯನ್ನು ಇರಿದು ಕೊಂದ ಸೊಸೆ; ಪಾರಾಗಲು ಮಾಡಿದ್ದು ಖತರ್ನಾಕ್​ ಐಡಿಯಾ !
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 02, 2022 | 7:28 PM

Share

ತಿರುಚ್ಚಿ: ಅತ್ತೆಯನ್ನು ಕೊಂದು ಬೆಂಕಿ ಹಚ್ಚಿದ ಸೊಸೆ, ನಂತರ ಇದೊಂದು ಬೆಂಕಿ ದುರಂತದಿಂದ ಆದ ಸಾವು ಎಂಬಂತೆ ಬಿಂಬಿಸಲು ಪ್ರಯತ್ನಿಸಿದ್ದಾಳೆ. ತಮಿಳುನಾಡಿನ ವಿಶ್ವಾಸ್​ನಗರದಲ್ಲಿ ಘಟನೆ ನಡೆದಿದೆ.   ಇದರಲ್ಲಿ ಆರೋಪಿ ಎನ್ನಿಸಿರುವ ಸೊಸೆ ರೇಷ್ಮಾ ವಯಸ್ಸು 27. ಮೃತ ಅತ್ತೆಯ ಹೆಸರು ನವೀನಾ (46). ಇವರ ತಾಯಿ ಎಸ್​.ಶಕಿಂಶಾ (74) ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳು ಬೆಂಕಿಯಿಂದ ಸುಟ್ಟ ಗಾಯದಿಂದ ಸತ್ತಿದ್ದಾಳೆ. ಆದರೆ ಆಕೆಯ ತಲೆ ಮೇಲೆ ಗಾಯವಾಗಿದೆ.  ನನ್ನ ಮಗಳಿಗೆ ಹೀಗೆ ಆಗುವಾಗ ಆಕೆಯ ಸೊಸೆ ರೇಷ್ಮಾ ಮತ್ತು ಅವಳ 2ವರ್ಷದ ಮಗ ಅಲ್ಲಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದಾದ ಬಳಿಕ ಪೊಲೀಸರು ತನಿಖೆ ಶುರು ಮಾಡಿದ್ದರು.

ಶಕಿಂಶಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತಳ ದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಿದ್ದರು. ರೇಷ್ಮಾಳನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತಾನು ಸ್ಕ್ರ್ಯೂಡ್ರೈವರ್​ನಿಂದ ಹೊಡೆದು ಅತ್ತೆಯನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅಷ್ಟೇ ಅಲ್ಲ, ನಂತರ ಆಕೆಯ ಶವಕ್ಕೆ ಸೀಮೆಎಣ್ಣೆ ಹಾಕಿ, ಬೆಂಕಿ ಹಚ್ಚಿದ್ದಾಗಿಯೂ ತಿಳಿಸಿದ್ದಾಳೆ.  ನವೀನಾ ಮೊದಲು ಅಡುಗೆ ಮನೆಯಲ್ಲಿ ನೆಲದ ಮೇಲೆ ಬಿದ್ದರು. ನಂತರ ತನ್ನನ್ನು ಎತ್ತುವಂತೆ ನನ್ನ ಬಳಿ ಕೇಳಿದಳು. ಆದರೆ ಸ್ವಲ್ಪ ತಡವಾಗುತ್ತಿದ್ದಂತೆ ನನ್ನನ್ನು ನಿಂದಿಸಲು ಪ್ರಯತ್ನ ಪಟ್ಟಳು. ಆಗ ನನಗೆ ಕೋಪ ಬಂದು, ಅಲ್ಲಿಯೇ ಇದ್ದ ಸ್ಕ್ರ್ಯೂಡ್ರೈವರ್​ನಿಂದ ಹಲವು ಬಾರಿ ಇರಿದು, ಹೊಡೆದು ಕೊಂದೆ. ನಂತರ ಅದನ್ನು ಬೆಂಕಿ ಅನಾಹುತವೆಂದು ಬಿಂಬಿಸಲು ಯತ್ನಿಸಿದೆ ಎಂದು ಒಪ್ಪಿಕೊಂಡಿದ್ದಾಳೆ.  ಸದ್ಯ ರೇಷ್ಮಾಳನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿಗಳಲ್ಲಿ ಉದ್ಯೋಗಾವಕಾಶ: 4ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ

Published On - 7:27 pm, Sun, 2 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ