AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಮೇಳದಲ್ಲೊಂದು ಸುಂದರ ಸಂಗಮ; 5ವರ್ಷದ ಹಿಂದೆ ಅರ್ಧಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತೆ ಕುಟುಂಬ ಕೂಡಿಕೊಂಡದ್ದು ಹೇಗೆ?

2016ರಲ್ಲಿ ಕೃಷ್ಣಾ ದೇವಿ ತನ್ನ ಕಿರಿಯಪುತ್ರಿಯನ್ನು ಕಳೆದುಕೊಂಡಿದ್ದರು. ಈ ದುಃಖದಲ್ಲಿದ್ದ ಅವರು ಹರಿದ್ವಾರದಲ್ಲಿ ನಡೆದಿದ್ದ ಅರ್ಧಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಅರ್ಧ ಕುಂಭಮೇಳಕ್ಕೆ ಹೋಗಿದ್ದ ಕೃಷ್ಣಾ ದೇವಿ ಅಲ್ಲಿ ದಾರಿ ತಪ್ಪಿ ಬೇರೆಡೆಗೆ ನಡೆದಿದ್ದರು.

ಮಹಾಕುಂಭಮೇಳದಲ್ಲೊಂದು ಸುಂದರ ಸಂಗಮ; 5ವರ್ಷದ ಹಿಂದೆ ಅರ್ಧಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತೆ ಕುಟುಂಬ ಕೂಡಿಕೊಂಡದ್ದು ಹೇಗೆ?
ಮಹಾಕುಂಭಮೇಳದಲ್ಲಿ ಮತ್ತೆ ಒಂದಾದ ದಂಪತಿ
Lakshmi Hegde
|

Updated on: Apr 09, 2021 | 12:22 PM

Share

ಹರಿದ್ವಾರ: ಇದೊಂದು ಪವಾಡವೇ ಎಂದು ಹೇಳಬೇಕು. ಅರ್ಧಕುಂಭಮೇಳದಲ್ಲಿ ಕುಟುಂಬದಿಂದ ದೂರವಾಗಿದ್ದ ಉತ್ತರ ಪ್ರದೇಶದ 65ವರ್ಷದ ಮಹಿಳೆಯೊಬ್ಬರು 5 ವರ್ಷಗಳ ಬಳಿಕ ಈಗ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮತ್ತೆ ಮನೆಯವರೊಂದಿಗೆ ಕೂಡಿಕೊಂಡ ಘಟನೆ ನಡೆದಿದೆ. 2016ರಲ್ಲಿ ಹರಿದ್ವಾರದಲ್ಲಿ ನಡೆದಿದ್ದ ಅರ್ಧಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಕೃಷ್ಣಾದೇವಿ ಕಾಣೆಯಾದ ನಂತರ ಮನೆಯವರು ದೂರು ನೀಡಿದ್ದರು. ಜಾಹೀರಾತುಗಳನ್ನು ಕೂಡ ನೀಡಿ, ತುಂಬ ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮತ್ತೆ ತಮ್ಮ ಕುಟುಂಬದವರ ಜತೆ ಕೂಡಿದ್ದಾರೆ.

2016ರಲ್ಲಿ ಕೃಷ್ಣಾ ದೇವಿ ತನ್ನ ಕಿರಿಯಪುತ್ರಿಯನ್ನು ಕಳೆದುಕೊಂಡಿದ್ದರು. ಈ ದುಃಖದಲ್ಲಿದ್ದ ಅವರು ಹರಿದ್ವಾರದಲ್ಲಿ ನಡೆದಿದ್ದ ಅರ್ಧಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಅರ್ಧ ಕುಂಭಮೇಳಕ್ಕೆ ಹೋಗಿದ್ದ ಕೃಷ್ಣಾ ದೇವಿ ಅಲ್ಲಿ ದಾರಿ ತಪ್ಪಿ ಬೇರೆಡೆಗೆ ನಡೆದಿದ್ದರು. ಬಳಿಕ ಒಂದು ವಸತಿ ಗೃಹದಲ್ಲಿ ಆಶ್ರಯ ಪಡೆದು, ವಾರಗಳ ಬಳಿಕ ಮತ್ತೊಂದು ವಸತಿಗೃಹಕ್ಕೆ ಹೋಗಿದ್ದರು. ಆದರೆ ಮನೆಯವರು ಎಷ್ಟೇ ಪ್ರಯತ್ನ ಪಟ್ಟರೂ ಅವರನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿಯ ಮಹಾಕುಂಭಮೇಳದಲ್ಲಿ ಇಲ್ಲಿಗೆ ಬರುವವರ ಗುರುತು ಪರಿಶೀಲನೆ ಮಾಡುವ ವೇಳೆ ಇವರು ಅಂದು ಕಾಣೆಯಾದ ಕೃಷ್ಣಾ ದೇವಿ ಎಂಬುದು ಗೊತ್ತಾಗಿದೆ.

ಅಂದು ಕೃಷ್ಣಾದೇವಿ ನಾಪತ್ತೆಯಾದಾಗಿನಿಂದಲೂ ಎಲ್ಲ ಧಾರ್ಮಿಕ ಪ್ರದೇಶಗಳಲ್ಲೂ ಹುಡುಕಿದ್ದೇವೆ. ಪೇಪರ್​ಗಳಲ್ಲಿ ಫೋಟೋ ಹಾಕಿದ್ದೆವು. ಟಿವಿಗಳನ್ನೂ ಜಾಹಿರಾತು ಕೊಟ್ಟಿದ್ದೆವು. ಉದಯ್​ಪುರ್​ ಠಾಣೆಯಲ್ಲಿ ದೂರು ನೀಡಲಾಗಿತ್ತು. ವರ್ಷಗಳು ಕಳೆಯುತ್ತಿದ್ದವು ಹೊರತು  ಈಕೆ ಮಾತ್ರ ಸಿಗುತ್ತಿರಲಿಲ್ಲ ಎಂದು ಕೃಷ್ಣಾದೇವಿ ಪತಿ ಜ್ವಾಲಾಪ್ರಸಾದ್ ತಿಳಿಸಿದ್ದಾರೆ. ಯಾವುದೇ ಕುಂಭಮೇಳವಾದರೂ ಇಲ್ಲಿಗೆ ಭೇಟಿ ನೀಡುವವರ ಗುರುತು ಪರಿಶೀಲನೆಯನ್ನು ಪೊಲೀಸರು ನಡೆಸುತ್ತಾರೆ.

ಇದನ್ನೂ ಓದಿ: Virat Kohli IPL 2021 RCB Team Player: ಆರ್​ಸಿಬಿ ರನ್ ಮಷಿನ್ ವಿರಾಟ್​ ಕೊಹ್ಲಿ ಈ ಬಾರಿಯಾದರೂ ತಂಡವನ್ನು ಚಾಂಪಿಯನ್ ಮಾಡ್ತಾರಾ?

ಈಗಾಗಲೇ ಬೆಂಗಳೂರಿನಲ್ಲಿ 96 ಮಂದಿ ಡಿಸ್ಮಿಸ್ ಆಗಿದ್ದಾರೆ. ನೀನೂ.. ಸಾರಿಗೆ ಇಲಾಖೆ ವಾರ್ನಿಂಗ್​ ಒತ್ತಡಕ್ಕೆ ಸಿಲುಕಿದ ಸಿಬ್ಬಂದಿ

Follow Us
Lakshmi Hegde
Lakshmi Hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ