AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರಗೊಂಡು ಪಿಯು ವಿದ್ಯಾರ್ಥಿಯನ್ನು ಮೂರನೇ ಮದುವೆಯಾದ 3 ಮಕ್ಕಳ ತಾಯಿ

ಮಹಿಳೆಯೊಬ್ಬರು ಪಿಯು ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದು ಆಕೆಗೆ ಮೂರನೇ ಮದುವೆಯಾಗಿದ್ದು, ಈಗಾಗಲೇ ಮೂವರು ಮಕ್ಕಳಿದ್ದಾರೆ. ಪತಿಗೆ ವಿಚ್ಛೇದನ ನೀಡಿ ಮೂವರು ಮಕ್ಕಳನ್ನು ಬಿಟ್ಟು ಆಕೆ ಬಾಲಕನ ಮನೆಗೆ ಬಂದಿದ್ದಾಳೆ. ಆಕೆ ಬೇರೆ ಧರ್ಮದವಳಾಗಿದ್ದು, ಮತಾಂತರಗೊಂಡು ಆತನನ್ನು ಮದುವೆಯಾಗಿದ್ದಾಳೆ.

ಮತಾಂತರಗೊಂಡು ಪಿಯು ವಿದ್ಯಾರ್ಥಿಯನ್ನು ಮೂರನೇ ಮದುವೆಯಾದ 3 ಮಕ್ಕಳ ತಾಯಿ
ಮದುವೆ -ಸಾಂದರ್ಭಿಕ ಚಿತ್ರImage Credit source: Business Standard
ನಯನಾ ರಾಜೀವ್
|

Updated on: Apr 10, 2025 | 8:58 AM

Share

ಉತ್ತರ ಪ್ರದೇಶ, ಏಪ್ರಿಲ್ 10: ಮಹಿಳೆಯೊಬ್ಬಳು ಮತಾಂತರ(Conversion)ಗೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ. ಆಕೆಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಮೊದಲು ಶಬ್ನಮ್ ಎಂದು ಕರೆಯಲ್ಪಡುತ್ತಿದ್ದ ಆ ಮಹಿಳೆ ಈಗ ಶಿವಾನಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದಾಳೆ. ಇದು ಆಕೆಗೆ ಮೂರನೇ ಮದುವೆ.

ಶಿವಾನಿಯು ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಳು, ಆಕೆ ಎರಡನೇ ಗಂಡನಿಗೆ ವಿಚ್ಛೇದನ ನೀಡಿ ಮೂವರು ಹೆಣ್ಣುಮಕ್ಕಳನ್ನು ಆತನ ಕಸ್ಟಡಿಯಲ್ಲಿ ಬಿಟ್ಟು, ಸ್ಥಳೀಯ ದೇವಸ್ಥಾನವೊಂದರಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ.

ಕೆಲವು ದಿನಗಳ ಹಿಂದೆ ಎರಡೂ ಕುಟುಂಬಗಳ ನಡುವೆ ಪಂಚಾಯಿತಿ ನಡೆದಿತ್ತು, ಮಹಿಳೆ ವಯಸ್ಕಳಾಗಿರುವುದರಿಂದ ಅವಳು ಬಯಸಿದ ಸ್ಥಳದಲ್ಲಿ ವಾಸಿಸಲು ಸ್ವತಂತ್ರಳು ಎಂದು ನಿರ್ಧರಿಸಲಾಯಿತು. ಶಿವಾನಿ ತನ್ನ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದು, ತನ್ನ ನಿರ್ಧಾರದಿಂದ ತೃಪ್ತಳಾಗಿದ್ದಾಳೆ ಎಂದು ಹೇಳಿದರು. ವಿದ್ಯಾರ್ಥಿ ಕೂಡ ಅದನ್ನೇ ಹೇಳಿದ್ದು, ತಾವು ಸಂತೋಷವಾಗಿದ್ದೇವೆ ಮತ್ತು ಹಸ್ತಕ್ಷೇಪ ಬಯಸುವುದಿಲ್ಲ ಎಂದು ಹೇಳಿದ್ದಾನೆ.

ಇದನ್ನೂ ಓದಿ
Image
ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ!
Image
ಅನ್ಯಧರ್ಮದ ಯುವತಿಯರ ಪ್ರೀತಿಸಿ ಮದುವೆಯಾಗಿ: ಹೇಳಿಕೆಗೆ ಬದ್ಧವೆಂದ ಸೂಲಿಬೆಲೆ
Image
ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ!
Image
ತುಮಕೂರು: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ

ಮತ್ತಷ್ಟು ಓದಿ: ಹುಬ್ಬಳ್ಳಿ: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು

ಇದಕ್ಕೂ ಮೊದಲು, ಶಬ್ನಮ್ ಅಲಿಗಢದಲ್ಲಿ ವಿವಾಹವಾಗಿದ್ದರು, ಆದರೆ ನಂತರ ದಂಪತಿ ವಿಚ್ಛೇದನ ಪಡೆದರು. ಅವರ ಎರಡನೇ ಮದುವೆ ಸುಮಾರು ಎಂಟು ವರ್ಷಗಳ ಹಿಂದೆ ನಡೆದಿತ್ತು. ಒಂದು ವರ್ಷದ ಹಿಂದೆ, ಅವರ ಪತಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಅಂಗವಿಕಲರಾದರು, ನಂತರ ಆಕೆಯ ಸಂಬಂಧ ಬಾಲಕನೊಂದಿಗೆ ಶುರುವಾಗಿತ್ತು ಸಂಬಂಧ ಪ್ರಾರಂಭವಾಯಿತು.

ಇಬ್ಬರೂ ಶಾಂತಿಯುತವಾಗಿ ಒಟ್ಟಿಗೆ ಬದುಕಬೇಕೆಂದು ನಾವು ಆಶಿಸುತ್ತೇವೆ ಎಂದು ಬಾಲಕನ ತಂದೆ ತಮ್ಮ ಮಗನ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ