AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು

ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕೆಲವು ಯುವಕರು ಕಿರುಕುಳ ನೀಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು
ಮಹಿಳೆ
ನಯನಾ ರಾಜೀವ್
|

Updated on: Aug 01, 2024 | 10:56 AM

Share

ಉತ್ತರ ಪ್ರದೇಶ, ದೆಹಲಿ, ಉತ್ತರಾಖಂಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ರಸ್ತೆಗಳೆಲ್ಲವೂ ಜಲಾವೃತವಾಗಿವೆ, ಹಲವು ಮನೆಗಳಿಗೆ ನೀರು ನುಗ್ಗಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಓಡಾಡುವ ಜನರ ಬಗ್ಗೆ ಅನುಕಂಪ ತೋರುವ ಬದಲು ಕೆಲವು ಪುಂಡರು ಮಹಿಳೆಗೆ ಕಿರುಕುಳ ನೀಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಬಳಿ ಇರುವ ತಾಜ್ ಹೋಟೆಲ್ ಸೇತುವೆಯ ಕೆಳಗೆ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿದೆ. ಮಹಿಳೆಯೊಬ್ಬರು ವ್ಯಕ್ತಿಯೊಂದಿಗೆ ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದರು.

ಕೆಲವು ಯುವಕರು ಅದೇ ನೀರಿನಲ್ಲಿ ಆಟವಾಡುತ್ತಿದ್ದರು, ಈ ಬೈಕ್​ ಆ ದಾರಿಯಲ್ಲಿ ಹೋಗುತ್ತಿದ್ದಂತೆ ನೀರನ್ನು ಬೈಕ್​ ಮೇಲೆ ಎರಚಲು ಶುರು ಮಾಡಿದ್ದರು. ಬಳಿಕ ಬೈಕ್​ ಮುಂದೆ ಹೋಗದಂತೆ ತಡೆದ ಬಳಿಕ ಬೈಕ್​ನಲ್ಲಿದ್ದ ಮಹಿಳೆ ಸೇರಿ ಇಬ್ಬರು ಸವಾರರು ಕೆಳಗೆ ನೀರಿನಲ್ಲಿ ಬಿದ್ದಿದ್ದಾರೆ.

ಆದರೂ ಅವರು ನೀರನ್ನು ಎರಚುವುದನ್ನು ಬಿಟ್ಟಿರಲಿಲ್ಲ. ಮಹಿಳೆಯನ್ನು ಕೂಡಲೇ ಅಲ್ಲಿದ್ದವರ್ಯಾರೋ ಕೆಳಗಿನಿಂದ ಮೇಲಕ್ಕೆ ಎತ್ತಿದ್ದಾರೆ. ವಿಡಿಯೋದಲ್ಲಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ಕೂಡ ಕಾಣಬಹುದಾಗಿದೆ.

ಮತ್ತಷ್ಟು ಓದಿ: ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ

ವರದಿಗಳ ಪ್ರಕಾರ, ಪೊಲೀಸರು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಕಿರುಕುಳ ನೀಡಿದವರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?