AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು

ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕೆಲವು ಯುವಕರು ಕಿರುಕುಳ ನೀಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು
ಮಹಿಳೆ
ನಯನಾ ರಾಜೀವ್
|

Updated on: Aug 01, 2024 | 10:56 AM

Share

ಉತ್ತರ ಪ್ರದೇಶ, ದೆಹಲಿ, ಉತ್ತರಾಖಂಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ರಸ್ತೆಗಳೆಲ್ಲವೂ ಜಲಾವೃತವಾಗಿವೆ, ಹಲವು ಮನೆಗಳಿಗೆ ನೀರು ನುಗ್ಗಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಓಡಾಡುವ ಜನರ ಬಗ್ಗೆ ಅನುಕಂಪ ತೋರುವ ಬದಲು ಕೆಲವು ಪುಂಡರು ಮಹಿಳೆಗೆ ಕಿರುಕುಳ ನೀಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಬಳಿ ಇರುವ ತಾಜ್ ಹೋಟೆಲ್ ಸೇತುವೆಯ ಕೆಳಗೆ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿದೆ. ಮಹಿಳೆಯೊಬ್ಬರು ವ್ಯಕ್ತಿಯೊಂದಿಗೆ ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದರು.

ಕೆಲವು ಯುವಕರು ಅದೇ ನೀರಿನಲ್ಲಿ ಆಟವಾಡುತ್ತಿದ್ದರು, ಈ ಬೈಕ್​ ಆ ದಾರಿಯಲ್ಲಿ ಹೋಗುತ್ತಿದ್ದಂತೆ ನೀರನ್ನು ಬೈಕ್​ ಮೇಲೆ ಎರಚಲು ಶುರು ಮಾಡಿದ್ದರು. ಬಳಿಕ ಬೈಕ್​ ಮುಂದೆ ಹೋಗದಂತೆ ತಡೆದ ಬಳಿಕ ಬೈಕ್​ನಲ್ಲಿದ್ದ ಮಹಿಳೆ ಸೇರಿ ಇಬ್ಬರು ಸವಾರರು ಕೆಳಗೆ ನೀರಿನಲ್ಲಿ ಬಿದ್ದಿದ್ದಾರೆ.

ಆದರೂ ಅವರು ನೀರನ್ನು ಎರಚುವುದನ್ನು ಬಿಟ್ಟಿರಲಿಲ್ಲ. ಮಹಿಳೆಯನ್ನು ಕೂಡಲೇ ಅಲ್ಲಿದ್ದವರ್ಯಾರೋ ಕೆಳಗಿನಿಂದ ಮೇಲಕ್ಕೆ ಎತ್ತಿದ್ದಾರೆ. ವಿಡಿಯೋದಲ್ಲಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ಕೂಡ ಕಾಣಬಹುದಾಗಿದೆ.

ಮತ್ತಷ್ಟು ಓದಿ: ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ

ವರದಿಗಳ ಪ್ರಕಾರ, ಪೊಲೀಸರು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಕಿರುಕುಳ ನೀಡಿದವರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ.

Follow Us
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ