AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು

ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕೆಲವು ಯುವಕರು ಕಿರುಕುಳ ನೀಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು
ಮಹಿಳೆ
ನಯನಾ ರಾಜೀವ್
|

Updated on: Aug 01, 2024 | 10:56 AM

Share

ಉತ್ತರ ಪ್ರದೇಶ, ದೆಹಲಿ, ಉತ್ತರಾಖಂಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ರಸ್ತೆಗಳೆಲ್ಲವೂ ಜಲಾವೃತವಾಗಿವೆ, ಹಲವು ಮನೆಗಳಿಗೆ ನೀರು ನುಗ್ಗಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಓಡಾಡುವ ಜನರ ಬಗ್ಗೆ ಅನುಕಂಪ ತೋರುವ ಬದಲು ಕೆಲವು ಪುಂಡರು ಮಹಿಳೆಗೆ ಕಿರುಕುಳ ನೀಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಬಳಿ ಇರುವ ತಾಜ್ ಹೋಟೆಲ್ ಸೇತುವೆಯ ಕೆಳಗೆ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿದೆ. ಮಹಿಳೆಯೊಬ್ಬರು ವ್ಯಕ್ತಿಯೊಂದಿಗೆ ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದರು.

ಕೆಲವು ಯುವಕರು ಅದೇ ನೀರಿನಲ್ಲಿ ಆಟವಾಡುತ್ತಿದ್ದರು, ಈ ಬೈಕ್​ ಆ ದಾರಿಯಲ್ಲಿ ಹೋಗುತ್ತಿದ್ದಂತೆ ನೀರನ್ನು ಬೈಕ್​ ಮೇಲೆ ಎರಚಲು ಶುರು ಮಾಡಿದ್ದರು. ಬಳಿಕ ಬೈಕ್​ ಮುಂದೆ ಹೋಗದಂತೆ ತಡೆದ ಬಳಿಕ ಬೈಕ್​ನಲ್ಲಿದ್ದ ಮಹಿಳೆ ಸೇರಿ ಇಬ್ಬರು ಸವಾರರು ಕೆಳಗೆ ನೀರಿನಲ್ಲಿ ಬಿದ್ದಿದ್ದಾರೆ.

ಆದರೂ ಅವರು ನೀರನ್ನು ಎರಚುವುದನ್ನು ಬಿಟ್ಟಿರಲಿಲ್ಲ. ಮಹಿಳೆಯನ್ನು ಕೂಡಲೇ ಅಲ್ಲಿದ್ದವರ್ಯಾರೋ ಕೆಳಗಿನಿಂದ ಮೇಲಕ್ಕೆ ಎತ್ತಿದ್ದಾರೆ. ವಿಡಿಯೋದಲ್ಲಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ಕೂಡ ಕಾಣಬಹುದಾಗಿದೆ.

ಮತ್ತಷ್ಟು ಓದಿ: ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ

ವರದಿಗಳ ಪ್ರಕಾರ, ಪೊಲೀಸರು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಕಿರುಕುಳ ನೀಡಿದವರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ