AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ದುರುಳರು

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಮಗಳ ಪ್ರೇಮ ವಿವಾಹದಿಂದ ಹತಾಶಳಾದ ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಮಗಳ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ. ಅಳಿಯನ ತಾಯಿಯನ್ನು ಥಳಿಸಿ, ಬಟ್ಟೆಯನ್ನು ಹರಿದು ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ಪಂಜಾಬ್ ಡಿಜಿಪಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಪಂಜಾಬ್: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ದುರುಳರು
ಆರೋಪಿಗಳುImage Credit source: India Today
ನಯನಾ ರಾಜೀವ್
|

Updated on: Apr 07, 2024 | 8:55 AM

Share

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಮಗಳ ಪ್ರೇಮ ವಿವಾಹದಿಂದ ಹತಾಶಳಾದ ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಮಗಳ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ. ಅಳಿಯನ ತಾಯಿಯನ್ನು ಥಳಿಸಿ, ಬಟ್ಟೆಯನ್ನು ಹರಿದು ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ಪಂಜಾಬ್ ಡಿಜಿಪಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಈ ಸಂಪೂರ್ಣ ವಿಷಯವನ್ನು ತೀವ್ರವಾಗಿ ಗಮನಿಸಿದ ಪಂಜಾಬ್ ಮಹಿಳಾ ಆಯೋಗವು ಡಿಸಿ ಮತ್ತು ಎಸ್‌ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿತು. ಶನಿವಾರ ತಕ್ಷಣ ಪೊಲೀಸರು ಆರೋಪಿ ಮಹಿಳೆ ಮತ್ತು ಆಕೆಯ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಖೇಮಕರನ್ ವಿಧಾನಸಭಾ ಕ್ಷೇತ್ರದ ವಾಲ್ತೋಹಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದ ಯುವಕ ತನ್ನ ಪ್ರದೇಶದ ಹುಡುಗಿಯೊಂದಿಗೆ ಪ್ರೇಮ ವಿವಾಹವಾಗಿದ್ದ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪ್ರೇಮ ವಿವಾಹಕ್ಕೆ ಒಪ್ಪಿಗೆ ನೀಡಿದೆ. ಯುವತಿ ತಾಯಿ ಕುಲ್ವಿಂದರ್ ಕೌರ್ ತನ್ನ ಇಬ್ಬರು ಮಕ್ಕಳಾದ ಶರಣಜಿತ್ ಸಿಂಗ್ ಸನ್ನಿ, ಗುರ್ಚರಣ್ ಸಿಂಗ್ ಹಾಗೂ ಇತರರೊಂದಿಗೆ ಗುರುವಾರ ಅಳಿಯನ ಮನೆಯಲ್ಲಿ ಗಲಾಟೆ ಮಾಡಿದ್ದರು.

ಮತ್ತಷ್ಟು ಓದಿ:ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಈ ವೇಳೆ ಮನೆಯಲ್ಲಿ ಅಳಿಯ ಮತ್ತು ಮಗಳು ಇರಲಿಲ್ಲ. ಮನೆಯಲ್ಲಿ ಅಳಿಯನ ತಾಯಿ ಇದ್ದರು. ಆರೋಪಿ ಮಹಿಳೆ ಕುಲ್ವಿಂದರ್ ಕೌರ್ ತನ್ನ ಇಬ್ಬರು ಮಕ್ಕಳಾದ ಶರಣಜಿತ್ ಸಿಂಗ್ ಸನ್ನಿ ಮತ್ತು ಗುರ್ಚರಣ್ ಸಿಂಗ್ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಹಿಳೆಗೆ ಹೊಡೆದು ಬಟ್ಟೆಯನ್ನು ಹರಿದು ಹಾಕಿದ್ದಾರೆ.

ಮಹಿಳೆ ತನ್ನ ಮನೆಯಿಂದ ಬೀದಿಗೆ ಓಡಿ ಬಂದು ದಿನಸಿ ಅಂಗಡಿಯಲ್ಲಿ ಆಶ್ರಯ ಪಡೆದಿದ್ದರು. ಆರೋಪಿಗಳು ಇಡೀ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಅಂತರ್ಜಾಲ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ. ಶುಕ್ರವಾರ ಸಂಜೆ ಆಯೋಗವು ಡಿಸಿ ಮತ್ತು ಎಸ್‌ಎಸ್‌ಪಿ ಅವರಿಂದ 24 ಗಂಟೆಗಳ ಒಳಗೆ ವರದಿ ಕೇಳಿದೆ.

ಈ ಸಂದರ್ಭದಲ್ಲಿ ಆರೋಪಿ ಮಹಿಳೆ ಕುಲ್ವಿಂದರ್ ಕೌರ್, ಪತ್ನಿ ಬಲ್ದೇವ್ ಸಿಂಗ್, ಆಕೆಯ ಮಗ ಗುರ್ಚರಣ್ ಸಿಂಗ್ ಮತ್ತು ಮೂರನೇ ಆರೋಪಿ ಸಂದೀಪ್ ಸಿಂಗ್ ಸನ್ನಿ ಪುತ್ರ ಪ್ರತಾಪ್ ಸಿಂಗ್ ವಾಲ್ತೋಹಾ ನಿವಾಸಿಗಳನ್ನು ಬಂಧಿಸಲಾಗಿದೆ. ಆರೋಪಿ ಮಹಿಳೆ ಕುಲ್ವಿಂದರ್ ಕೌರ್ ಅವರ ಹಿರಿಯ ಪುತ್ರ ಶರಣಜಿತ್ ಸಿಂಗ್ ಸನ್ನಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಹರ್ಜೀತ್ ಸಿಂಗ್ ಸಂಧು ಶನಿವಾರ ವಾಲ್ತೋಹಾ ಗ್ರಾಮಕ್ಕೆ ಆಗಮಿಸಿ ಸಂತ್ರಸ್ತ ಮಹಿಳೆಯೊಂದಿಗೆ ಮಾತನಾಡಿದರು. ಆಮ್ ಆದ್ಮಿ ಪಕ್ಷದ ಸರ್ಕಾರದ ಅವಧಿಯಲ್ಲಿ ಪಂಜಾಬ್‌ನಲ್ಲಿ ಗೂಂಡಾಗಿರಿ ಉತ್ತುಂಗದಲ್ಲಿದೆ ಎಂದು ಸಂಧು ಹೇಳಿದ್ದಾರೆ.

ಮಹಿಳೆಯರು ಅಸುರಕ್ಷಿತರಾಗಿದ್ದಾರೆ. ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ಯಾವುದೇ ನಷ್ಟವಾದರೆ ಅದಕ್ಕೆ ಪೊಲೀಸ್ ಆಡಳಿತವೇ ನೇರ ಹೊಣೆಯಾಗಲಿದೆ ಎಂದು ಸಂಧು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!