AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ದುರುಳರು

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಮಗಳ ಪ್ರೇಮ ವಿವಾಹದಿಂದ ಹತಾಶಳಾದ ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಮಗಳ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ. ಅಳಿಯನ ತಾಯಿಯನ್ನು ಥಳಿಸಿ, ಬಟ್ಟೆಯನ್ನು ಹರಿದು ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ಪಂಜಾಬ್ ಡಿಜಿಪಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಪಂಜಾಬ್: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ದುರುಳರು
ಆರೋಪಿಗಳುImage Credit source: India Today
ನಯನಾ ರಾಜೀವ್
|

Updated on: Apr 07, 2024 | 8:55 AM

Share

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಮಗಳ ಪ್ರೇಮ ವಿವಾಹದಿಂದ ಹತಾಶಳಾದ ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಮಗಳ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ. ಅಳಿಯನ ತಾಯಿಯನ್ನು ಥಳಿಸಿ, ಬಟ್ಟೆಯನ್ನು ಹರಿದು ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ಪಂಜಾಬ್ ಡಿಜಿಪಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಈ ಸಂಪೂರ್ಣ ವಿಷಯವನ್ನು ತೀವ್ರವಾಗಿ ಗಮನಿಸಿದ ಪಂಜಾಬ್ ಮಹಿಳಾ ಆಯೋಗವು ಡಿಸಿ ಮತ್ತು ಎಸ್‌ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿತು. ಶನಿವಾರ ತಕ್ಷಣ ಪೊಲೀಸರು ಆರೋಪಿ ಮಹಿಳೆ ಮತ್ತು ಆಕೆಯ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಖೇಮಕರನ್ ವಿಧಾನಸಭಾ ಕ್ಷೇತ್ರದ ವಾಲ್ತೋಹಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದ ಯುವಕ ತನ್ನ ಪ್ರದೇಶದ ಹುಡುಗಿಯೊಂದಿಗೆ ಪ್ರೇಮ ವಿವಾಹವಾಗಿದ್ದ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪ್ರೇಮ ವಿವಾಹಕ್ಕೆ ಒಪ್ಪಿಗೆ ನೀಡಿದೆ. ಯುವತಿ ತಾಯಿ ಕುಲ್ವಿಂದರ್ ಕೌರ್ ತನ್ನ ಇಬ್ಬರು ಮಕ್ಕಳಾದ ಶರಣಜಿತ್ ಸಿಂಗ್ ಸನ್ನಿ, ಗುರ್ಚರಣ್ ಸಿಂಗ್ ಹಾಗೂ ಇತರರೊಂದಿಗೆ ಗುರುವಾರ ಅಳಿಯನ ಮನೆಯಲ್ಲಿ ಗಲಾಟೆ ಮಾಡಿದ್ದರು.

ಮತ್ತಷ್ಟು ಓದಿ:ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಈ ವೇಳೆ ಮನೆಯಲ್ಲಿ ಅಳಿಯ ಮತ್ತು ಮಗಳು ಇರಲಿಲ್ಲ. ಮನೆಯಲ್ಲಿ ಅಳಿಯನ ತಾಯಿ ಇದ್ದರು. ಆರೋಪಿ ಮಹಿಳೆ ಕುಲ್ವಿಂದರ್ ಕೌರ್ ತನ್ನ ಇಬ್ಬರು ಮಕ್ಕಳಾದ ಶರಣಜಿತ್ ಸಿಂಗ್ ಸನ್ನಿ ಮತ್ತು ಗುರ್ಚರಣ್ ಸಿಂಗ್ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಹಿಳೆಗೆ ಹೊಡೆದು ಬಟ್ಟೆಯನ್ನು ಹರಿದು ಹಾಕಿದ್ದಾರೆ.

ಮಹಿಳೆ ತನ್ನ ಮನೆಯಿಂದ ಬೀದಿಗೆ ಓಡಿ ಬಂದು ದಿನಸಿ ಅಂಗಡಿಯಲ್ಲಿ ಆಶ್ರಯ ಪಡೆದಿದ್ದರು. ಆರೋಪಿಗಳು ಇಡೀ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಅಂತರ್ಜಾಲ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ. ಶುಕ್ರವಾರ ಸಂಜೆ ಆಯೋಗವು ಡಿಸಿ ಮತ್ತು ಎಸ್‌ಎಸ್‌ಪಿ ಅವರಿಂದ 24 ಗಂಟೆಗಳ ಒಳಗೆ ವರದಿ ಕೇಳಿದೆ.

ಈ ಸಂದರ್ಭದಲ್ಲಿ ಆರೋಪಿ ಮಹಿಳೆ ಕುಲ್ವಿಂದರ್ ಕೌರ್, ಪತ್ನಿ ಬಲ್ದೇವ್ ಸಿಂಗ್, ಆಕೆಯ ಮಗ ಗುರ್ಚರಣ್ ಸಿಂಗ್ ಮತ್ತು ಮೂರನೇ ಆರೋಪಿ ಸಂದೀಪ್ ಸಿಂಗ್ ಸನ್ನಿ ಪುತ್ರ ಪ್ರತಾಪ್ ಸಿಂಗ್ ವಾಲ್ತೋಹಾ ನಿವಾಸಿಗಳನ್ನು ಬಂಧಿಸಲಾಗಿದೆ. ಆರೋಪಿ ಮಹಿಳೆ ಕುಲ್ವಿಂದರ್ ಕೌರ್ ಅವರ ಹಿರಿಯ ಪುತ್ರ ಶರಣಜಿತ್ ಸಿಂಗ್ ಸನ್ನಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಹರ್ಜೀತ್ ಸಿಂಗ್ ಸಂಧು ಶನಿವಾರ ವಾಲ್ತೋಹಾ ಗ್ರಾಮಕ್ಕೆ ಆಗಮಿಸಿ ಸಂತ್ರಸ್ತ ಮಹಿಳೆಯೊಂದಿಗೆ ಮಾತನಾಡಿದರು. ಆಮ್ ಆದ್ಮಿ ಪಕ್ಷದ ಸರ್ಕಾರದ ಅವಧಿಯಲ್ಲಿ ಪಂಜಾಬ್‌ನಲ್ಲಿ ಗೂಂಡಾಗಿರಿ ಉತ್ತುಂಗದಲ್ಲಿದೆ ಎಂದು ಸಂಧು ಹೇಳಿದ್ದಾರೆ.

ಮಹಿಳೆಯರು ಅಸುರಕ್ಷಿತರಾಗಿದ್ದಾರೆ. ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ಯಾವುದೇ ನಷ್ಟವಾದರೆ ಅದಕ್ಕೆ ಪೊಲೀಸ್ ಆಡಳಿತವೇ ನೇರ ಹೊಣೆಯಾಗಲಿದೆ ಎಂದು ಸಂಧು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್