AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​

Hyderabad Metro: ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ...

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
ಹೈದರಾಬಾದ್​ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
TV9 Web
| Updated By: ಸಾಧು ಶ್ರೀನಾಥ್​|

Updated on:Nov 11, 2022 | 5:53 PM

Share

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ… ಹೈದರಾಬಾದ್​ ಮೆಟ್ರೋದಲ್ಲಿ ಅಪಘಾತಗಳು ಮಾಮೂಲಿಯಾಗಿವೆ. ಹೈದರಾಬಾದಿನ ಹೈಟೆಕ್ ಸಿಟಿ ಮೆಟ್ರೋ ನಿಲ್ದಾಣದಲ್ಲಿ (Hyderabad Metro Rail) ಈಗ ಅಂತಹ ಘಟನೆ ನಡೆದಿದೆ.

ಗುರುವಾರ ಸಂಜೆ ಎಸ್ಕಲೇಟರ್ ಮೂಲಕ ಕೆಳಗೆ ಬರುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಬಲ ಕಾಲು ಮೆಟ್ರೋ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ಗೆ ಸಿಲುಕಿಕೊಂಡಿದೆ. ಈ ಘಟನೆಯಲ್ಲಿ ಅವರಿಗೆ ದೊಡ್ಡ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹ ತಕ್ಷಣಕ್ಕೆ ಅವರಿಗೆ ದೊರೆತಿಲ್ಲ. ಇದರಿಂದ ಸಂತ್ರಸ್ತೆ ಪ್ರಜ್ಞೆ ತಪ್ಪಿದ್ದಾರೆ. ಸಹ ಪ್ರಯಾಣಿಕರು ಜೋರಾಗಿ ಕಿರುಚಿದ್ದರಿಂದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯ ನಂತರ ನಿರ್ಲಕ್ಷ್ಯ ವಹಿಸಿದ ಮೆಟ್ರೋ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ.. ಹೈದರಾಬಾದ್ ಮೆಟ್ರೋದಲ್ಲಿ ಮತ್ತೊಮ್ಮೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪಂಜಾಗುಟ್ಟದ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ರೈಲು ಬಹಳ ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಆದರೆ, ಇತ್ತೀಚೆಗೆ ತಾಂತ್ರಿಕ ಕಾರಣಗಳಿಂದಾಗಿ ಮೆಟ್ರೊ ರೈಲು ಆಗಾಗ ನಿಲುಗಡೆ ಆಗುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ನಾಂಪಲ್ಲಿ ಮತ್ತು ಮುಸರಂಬಾಗ್ ನಿಲ್ದಾಣಗಳಲ್ಲಿ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ. ಈ ತಿಂಗಳ 4ರಂದು ಬೆಳಗ್ಗೆ ತುಂಬಾ ಹೊತ್ತು ರೈಲುಗಳು ಓಡಲಿಲ್ಲ. ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷದಿಂದ ರೈಲುಗಳು ಬಹಳ ಹೊತ್ತು ನಿಂತಿದ್ದವು. ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Published On - 5:52 pm, Fri, 11 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?