AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​

Hyderabad Metro: ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ...

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
ಹೈದರಾಬಾದ್​ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
TV9 Web
| Edited By: ಸಾಧು ಶ್ರೀನಾಥ್​|

Updated on:Nov 11, 2022 | 5:53 PM

Share

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ… ಹೈದರಾಬಾದ್​ ಮೆಟ್ರೋದಲ್ಲಿ ಅಪಘಾತಗಳು ಮಾಮೂಲಿಯಾಗಿವೆ. ಹೈದರಾಬಾದಿನ ಹೈಟೆಕ್ ಸಿಟಿ ಮೆಟ್ರೋ ನಿಲ್ದಾಣದಲ್ಲಿ (Hyderabad Metro Rail) ಈಗ ಅಂತಹ ಘಟನೆ ನಡೆದಿದೆ.

ಗುರುವಾರ ಸಂಜೆ ಎಸ್ಕಲೇಟರ್ ಮೂಲಕ ಕೆಳಗೆ ಬರುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಬಲ ಕಾಲು ಮೆಟ್ರೋ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ಗೆ ಸಿಲುಕಿಕೊಂಡಿದೆ. ಈ ಘಟನೆಯಲ್ಲಿ ಅವರಿಗೆ ದೊಡ್ಡ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹ ತಕ್ಷಣಕ್ಕೆ ಅವರಿಗೆ ದೊರೆತಿಲ್ಲ. ಇದರಿಂದ ಸಂತ್ರಸ್ತೆ ಪ್ರಜ್ಞೆ ತಪ್ಪಿದ್ದಾರೆ. ಸಹ ಪ್ರಯಾಣಿಕರು ಜೋರಾಗಿ ಕಿರುಚಿದ್ದರಿಂದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯ ನಂತರ ನಿರ್ಲಕ್ಷ್ಯ ವಹಿಸಿದ ಮೆಟ್ರೋ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ.. ಹೈದರಾಬಾದ್ ಮೆಟ್ರೋದಲ್ಲಿ ಮತ್ತೊಮ್ಮೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪಂಜಾಗುಟ್ಟದ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ರೈಲು ಬಹಳ ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಆದರೆ, ಇತ್ತೀಚೆಗೆ ತಾಂತ್ರಿಕ ಕಾರಣಗಳಿಂದಾಗಿ ಮೆಟ್ರೊ ರೈಲು ಆಗಾಗ ನಿಲುಗಡೆ ಆಗುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ನಾಂಪಲ್ಲಿ ಮತ್ತು ಮುಸರಂಬಾಗ್ ನಿಲ್ದಾಣಗಳಲ್ಲಿ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ. ಈ ತಿಂಗಳ 4ರಂದು ಬೆಳಗ್ಗೆ ತುಂಬಾ ಹೊತ್ತು ರೈಲುಗಳು ಓಡಲಿಲ್ಲ. ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷದಿಂದ ರೈಲುಗಳು ಬಹಳ ಹೊತ್ತು ನಿಂತಿದ್ದವು. ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Published On - 5:52 pm, Fri, 11 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ