AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​

Hyderabad Metro: ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ...

ಮೆಟ್ರೋ ನಿಲ್ದಾಣದ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
ಹೈದರಾಬಾದ್​ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್ ನಲ್ಲಿ ಕಾಲು ಸಿಲುಕಿ ಮಹಿಳಾ ಪ್ಯಾಸೆಂಜರ್​ ಪರದಾಟ​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 11, 2022 | 5:53 PM

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಮೆಟ್ರೋ ದಲ್ಲಿ ಆಘಾತಕಾರಿ ಅಪಘಾತಗಳು ನಡೆಯುತ್ತಿವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸೂಕ್ತ ಸೂಚನೆಗಳು ಹಾಗೂ ಎಚ್ಚರಿಕೆಯ ಫಲಕಗಳಿಲ್ಲದೆ ಈ ಅನಾಹುತಗಳು, ಅವಾಂತರಗಳು ಘಟಿಸುತ್ತಿವೆ… ಹೈದರಾಬಾದ್​ ಮೆಟ್ರೋದಲ್ಲಿ ಅಪಘಾತಗಳು ಮಾಮೂಲಿಯಾಗಿವೆ. ಹೈದರಾಬಾದಿನ ಹೈಟೆಕ್ ಸಿಟಿ ಮೆಟ್ರೋ ನಿಲ್ದಾಣದಲ್ಲಿ (Hyderabad Metro Rail) ಈಗ ಅಂತಹ ಘಟನೆ ನಡೆದಿದೆ.

ಗುರುವಾರ ಸಂಜೆ ಎಸ್ಕಲೇಟರ್ ಮೂಲಕ ಕೆಳಗೆ ಬರುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಬಲ ಕಾಲು ಮೆಟ್ರೋ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ಗೆ ಸಿಲುಕಿಕೊಂಡಿದೆ. ಈ ಘಟನೆಯಲ್ಲಿ ಅವರಿಗೆ ದೊಡ್ಡ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹ ತಕ್ಷಣಕ್ಕೆ ಅವರಿಗೆ ದೊರೆತಿಲ್ಲ. ಇದರಿಂದ ಸಂತ್ರಸ್ತೆ ಪ್ರಜ್ಞೆ ತಪ್ಪಿದ್ದಾರೆ. ಸಹ ಪ್ರಯಾಣಿಕರು ಜೋರಾಗಿ ಕಿರುಚಿದ್ದರಿಂದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯ ನಂತರ ನಿರ್ಲಕ್ಷ್ಯ ವಹಿಸಿದ ಮೆಟ್ರೋ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ.. ಹೈದರಾಬಾದ್ ಮೆಟ್ರೋದಲ್ಲಿ ಮತ್ತೊಮ್ಮೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪಂಜಾಗುಟ್ಟದ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ರೈಲು ಬಹಳ ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಆದರೆ, ಇತ್ತೀಚೆಗೆ ತಾಂತ್ರಿಕ ಕಾರಣಗಳಿಂದಾಗಿ ಮೆಟ್ರೊ ರೈಲು ಆಗಾಗ ನಿಲುಗಡೆ ಆಗುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ನಾಂಪಲ್ಲಿ ಮತ್ತು ಮುಸರಂಬಾಗ್ ನಿಲ್ದಾಣಗಳಲ್ಲಿ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ. ಈ ತಿಂಗಳ 4ರಂದು ಬೆಳಗ್ಗೆ ತುಂಬಾ ಹೊತ್ತು ರೈಲುಗಳು ಓಡಲಿಲ್ಲ. ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷದಿಂದ ರೈಲುಗಳು ಬಹಳ ಹೊತ್ತು ನಿಂತಿದ್ದವು. ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Published On - 5:52 pm, Fri, 11 November 22

ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್