ಸ್ಯಾನಿಟರಿ ಪ್ಯಾಡ್ ವಿಲೇವಾರಿ ಕಾರ್ಯವಿಧಾನದ ಕೊರತೆ ಬಗ್ಗೆ ಕೇಂದ್ರ ಸಚಿವರಲ್ಲಿ ಪ್ರಶ್ನಿಸಿದ ವಿದ್ಯಾರ್ಥಿ;ಸಚಿವರ ಉತ್ತರ ಹೀಗಿತ್ತು

ನಾನು ವರ್ಷಗಳ ಹಿಂದೆ ಹಿಂದೆ ಪ್ರಮುಖ ವೈದ್ಯಕೀಯ ಸಂಸ್ಥೆಗೆ ಭೇಟಿ ನೀಡಿದ್ದೆ. ಅಲ್ಲಿ ಯೋಗ್ಯವಾದ ಶೌಚಾಲಯಗಳಿಲ್ಲ ಎಂಬುದನ್ನು ನಾನು ನೋಡಿದ್ದೆ. ಕನಿಷ್ಠ ಶೌಚಾಲಯದ ವ್ಯವಸ್ಥೆ ಮಾಡಿ ಎಂದು ನಾನು ಹೇಳಿದೆ.

ಸ್ಯಾನಿಟರಿ ಪ್ಯಾಡ್ ವಿಲೇವಾರಿ ಕಾರ್ಯವಿಧಾನದ ಕೊರತೆ ಬಗ್ಗೆ ಕೇಂದ್ರ ಸಚಿವರಲ್ಲಿ ಪ್ರಶ್ನಿಸಿದ ವಿದ್ಯಾರ್ಥಿ;ಸಚಿವರ ಉತ್ತರ ಹೀಗಿತ್ತು
ಜಿತೇಂದ್ರ ಸಿಂಗ್
Follow us
| Updated By: ರಶ್ಮಿ ಕಲ್ಲಕಟ್ಟ

Updated on:Aug 22, 2022 | 9:08 PM

ಪುಣೆ: ಪುಣೆಯ ಸಿಎಸ್‌ಐಆರ್- ನ್ಯಾಷನಲ್ ಕೆಮಿಕಲ್ ಪ್ರಯೋಗಾಲಯದ ಮಹಿಳಾ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jitendra Singh) ಅವರೊಂದಿಗೆ ನಡೆದ ಸಂವಾದದಲ್ಲಿ ಸಿಎಸ್‌ಐಆರ್ ಸಂಸ್ಥೆಗಳಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ವಿಲೇವಾರಿ ಕಾರ್ಯವಿಧಾನದ ಕೊರತೆಯನ್ನು ಹೇಳಿದ್ದಾರೆ. ಇದನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ರಾಜ್ಯ ಸಚಿವರು ಒಪ್ಪಿಕೊಂಡರೂ ಇನ್ಸ್ಟಿಟ್ಯೂಟ್ ನ ನಿರ್ದೇಶಕರು ಹಾಸ್ಟೆಲ್‌ಗಳು ಮತ್ತು ಲ್ಯಾಬ್‌ಗಳಲ್ಲಿ ಇದಕ್ಕೆ ಬೇಕಾದ ನೂತನ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. CSIR-URDIP ನ ಹೊಸ ಕಟ್ಟಡವನ್ನು ಉದ್ಘಾಟಿಸಲು ಸಿಂಗ್ ಅವರು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)-NCL ಗೆ ಭಾನುವಾರ ಭೇಟಿ ನೀಡಿದ್ದರು. ಇದು ಸರಿಯಾದ ವೇದಿಕೆಯಾಗಿದೆಯೇ ಎಂದು ನನಗೆ ತಿಳಿದಿಲ್ಲ. ಆದರೆ ಇತ್ತೀಚೆಗೆ ಅನೇಕ ಸಿಎಸ್ಐಆರ್ ಸಂಸ್ಥೆಗಳು ಸರಿಯಾದ ಸ್ಯಾನಿಟರಿ ಪ್ಯಾಡ್ ವಿಲೇವಾರಿ ಯಂತ್ರಗಳನ್ನು ಹೊಂದಿಲ್ಲ.ಹಾಗಾದರೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಮಹಿಳಾ ಸಂಶೋಧಕರ ಅಭ್ಯುದಯಕ್ಕಾಗಿ ಏನು ಮಾಡುತ್ತಿದೆ?” ಎಂದು ಸಚಿವರೊಂದಿಗೆ ಸಂವಾದದ ವೇಳೆ ಸಂಶೋಧನಾ ವಿದ್ಯಾರ್ಥಿಯೊಬ್ಬರು ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಂಗ್ ನಿಜ , ಇದು ಒಂದು ಸಮಸ್ಯೆಯಾಗಿದೆ. ಹಿಂದೆ ಕಡಿಮೆ ಮಹಿಳಾ ಸಂಶೋಧಕರು ಇದ್ದರು. ಅವರು ಇದನ್ನೆಲ್ಲ ಸಹಿಸಿಕೊಂಡು ಹೋಗುತ್ತಿದ್ದರು. ಮಹಿಳಾ ಸಂಶೋಧಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆ ಬಗ್ಗೆಯೂ ಗಮನ ಹರಿಸಲಾಗುವುದು ಎಂದಿದ್ದಾರೆ.

ನಾನು ವರ್ಷಗಳ ಹಿಂದೆ ಹಿಂದೆ ಪ್ರಮುಖ ವೈದ್ಯಕೀಯ ಸಂಸ್ಥೆಗೆ ಭೇಟಿ ನೀಡಿದ್ದೆ. ಅಲ್ಲಿ ಯೋಗ್ಯವಾದ ಶೌಚಾಲಯಗಳಿಲ್ಲ ಎಂಬುದನ್ನು ನಾನು ನೋಡಿದ್ದೆ. ಕನಿಷ್ಠ ಶೌಚಾಲಯದ ವ್ಯವಸ್ಥೆ ಮಾಡಿ ಎಂದು ನಾನು ಹೇಳಿದೆ ಏಕೆಂದರೆ ರಾತ್ರಿ ಪಾಳಿಯಲ್ಲಿ ವೈದ್ಯರ ಏನು ಮಾಡಬೇಕು? ಆದರೆ ಈಗ ಜಾಗೃತಿ ಹೆಚ್ಚುತ್ತಿದೆ. ಅದರ ಬಗ್ಗೆ ಗಮನ ಹರಿಸಲಾಗುತ್ತಿದೆ ಎದು ಸಿಂಗ್ ಹೇಳಿದ್ದಾರೆ. CSIR-NCL ನಿರ್ದೇಶಕ ಡಾ. ಆಶಿಶ್ ಲೆಲೆ, ಪಿಎಚ್‌ಡಿ ವಿದ್ಯಾರ್ಥಿಯು ಎತ್ತಿದ ಸಮಸ್ಯೆಯನ್ನು ವಿವರಿಸಲು ಸಚಿವರು ಕೇಳಿದಾಗ, NC ನ ಪಕ್ಕದಲ್ಲಿರುವ ಸ್ಟಾರ್ಟ್‌ಅಪ್ (ವೆಂಚರ್ ಸೆಂಟರ್‌ನಲ್ಲಿ) ಈ ಸಮಸ್ಯೆಯನ್ನು ಪರಿಶೀಲಿಸುತ್ತಿದೆ  ಇದಕ್ಕೆ ಪರಿಹಾರವನ್ನು ಹೊಂದಿದೆ ಎಂದು ಹೇಳಿದರು.

“ನಾವು ಅದನ್ನು ಹಾಸ್ಟೆಲ್‌ಗಳು ಮತ್ತು ಪ್ರಯೋಗಾಲಯಗಳಲ್ಲಿ ನಿಯೋಜಿಸುವ ಮೂಲಕ ಅದನ್ನು ತರಲು ಪ್ರಯತ್ನಿಸುತ್ತಿದ್ದೇವೆ. ಇದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ, ಆದರೆ ಕನಿಷ್ಠ ಪಕ್ಕದಲ್ಲಿ ಪರಿಹಾರವಿದೆ. ವೆಂಚರ್ ಸೆಂಟರ್‌ನ ನಿರ್ದೇಶಕರು ಇಲ್ಲಿ ತುಂಬಾ ಇದ್ದಾರೆ” ಎಂದು ಲೆಲೆ ಹೇಳಿದ್ದಾರೆ.

Published On - 9:01 pm, Mon, 22 August 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ