Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ

ಸರ್ಕಾರಿ ಉದ್ಯೋಗವನ್ನು ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನು ಮಹಿಳೆ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 29 ವರ್ಷದ ದೀಪಕ್ ಕುಮಾರ್ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ದೃಢಪಡಿಸಿದ್ದವು. ನಜೀಬಾಬಾದ್‌ನ ಕ್ಯಾರೇಜ್ ಮತ್ತು ವ್ಯಾಗನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ದೀಪಕ್ ಆದರ್ಶ ನಗರದ ಬಾಡಿಗೆ ಮನೆಯಲ್ಲಿ ಪತ್ನಿ ಶಿವಾನಿ ಜೊತೆ ವಾಸಿಸುತ್ತಿದ್ದರು.

ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ
ಆರೋಪಿ ಮಹಿಳೆ
Follow us
ನಯನಾ ರಾಜೀವ್
|

Updated on: Apr 08, 2025 | 3:04 PM

ಉತ್ತರ ಪ್ರದೇಶ, ಏಪ್ರಿಲ್ 8: ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್‌ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. ಆದರೆ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಆಕೆ ಹೇಳಿದ್ದಳು, 29 ವರ್ಷದ ದೀಪಕ್ ಕುಮಾರ್ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ದೃಢಪಡಿಸಿದ್ದವು. ನಜೀಬಾಬಾದ್‌ನ ಕ್ಯಾರೇಜ್ ಮತ್ತು ವ್ಯಾಗನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ದೀಪಕ್ ಆದರ್ಶ ನಗರದ ಬಾಡಿಗೆ ಮನೆಯಲ್ಲಿ ಪತ್ನಿ ಶಿವಾನಿ ಜೊತೆ ವಾಸಿಸುತ್ತಿದ್ದರು.  ಈ ಜೋಡಿ ಪ್ರೇಮ ವಿವಾಹವಾಗಿದ್ದರು.

ಕಳೆದ ಶುಕ್ರವಾರ ದೀಪಕ್ ಅವರ ಕುಟುಂಬಕ್ಕೆ ಶಿವಾನಿ ದೀಪಕ್​ಗೆ ಹೃದಯಾಘಾತವಾಗಿದೆ ಎಂದು ಹೇಳಿದ್ದರು. ದೀಪಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಮತ್ತು ನಂತರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಆದರೆ ವೈದ್ಯರು ಅವರನ್ನು ದಾಖಲಿಸಲು ನಿರಾಕರಿಸಿದರು. ಬಿಜ್ನೋರ್‌ನ ಜಿಲ್ಲಾ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ದೀಪಕ್ ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳನ್ನು ಗಮನಿಸಿದ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಿದಾಗ ಅನುಮಾನಗಳು ಹುಟ್ಟಿಕೊಂಡಿತ್ತು.ಕತ್ತು ಹಿಸುಕಿ ಸಾವನ್ನಪ್ಪಿರುವುದನ್ನು ದೃಢಪಟ್ಟಿತ್ತು. ದೀಪಕ್ ಅವರ ಸಹೋದರ ಪಿಯೂಷ್ ಅಲಿಯಾಸ್ ಮುಕುಲ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಶಿವಾನಿ ಮತ್ತು ಅಪರಿಚಿತ ಸಹಚರನ ವಿರುದ್ಧ ಪ್ರಕರಣ ದಾಖಲಿಸಿದರು. ಶಿವಾನಿಯನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ
Image
ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದವಳು ಗರ್ಭಿಣಿ!
Image
ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದ ಯುವಕ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
13 ವರ್ಷದ ಕ್ಯಾನ್ಸರ್​ ರೋಗಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಮತ್ತಷ್ಟು ಓದಿ: Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ

ಆರಂಭಿಕ ವಿಚಾರಣೆಯ ಸಮಯದಲ್ಲಿ, ಶಿವಾನಿ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದಳು ಆದರೆ ಅಂತಿಮವಾಗಿ ಅಪರಾಧವನ್ನು ಒಪ್ಪಿಕೊಂಡಳು. ಕೊಲೆಯ ಸಮಯದಲ್ಲಿ ಆತ ಊಟ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಆತನ ಗಂಟಲಿನಲ್ಲಿ ಆಹಾರ ಹಾಗೆಯೇ ಇತ್ತು. ಅವನನ್ನು ಕತ್ತು ಹಿಸುಕಲು ಹಗ್ಗವನ್ನು ಬಳಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ದೀಪಕ್ ಅವರ ಹಿನ್ನೆಲೆ ಮಣಿಪುರದ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸಿದ್ದು, 2023 ರಲ್ಲಿ ಅವರು ಆ ಹುದ್ದೆಯನ್ನು ತೊರೆದು ರೈಲ್ವೆಗೆ ಸೇರಿದರು.

ಇತ್ತೀಚೆಗೆ ಪತ್ನಿಯ ಕುಟುಂಬದೊಂದಿಗಿನ ಸಂಬಂಧ ಹದಗೆಟ್ಟಿದ್ದರಿಂದ ಅವರು ಆಕೆಯೊಂದಿಗೆ ಬೇರೆಡೆಗೆ ತೆರಳಿದ್ದರು. ದಂಪತಿಗೆ ವೇದಾಂತ್ ಎಂಬ ಒಂದು ವರ್ಷದ ಮಗನೂ ಇದ್ದಾನೆ. ಮೃತರ ಅವಲಂಬಿತ ಯೋಜನೆಯಡಿ ಉದ್ಯೋಗ ಮತ್ತು ಆರ್ಥಿಕ ಪ್ರಯೋಜನಗಳನ್ನು ಪಡೆಯಲು ಶಿವಾನಿ ಈ ಕೊಲೆ ಮಾಡಿರಬಹುದು ಎಂಬ ಆರೋಪಗಳು ಕೇಳಿಬಂದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ