AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ

Chennai Rains: ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ.

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ
ಎಚ್ಚರವಿಲ್ಲದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​
TV9 Web
| Edited By: |

Updated on:Nov 11, 2021 | 3:01 PM

Share

ಚೆನ್ನೈನಲ್ಲಿ ವಿಪರೀತ ಮಳೆ..(Chennai Rains)ಅನಾಹುತಗಳು ಸೃಷ್ಟಿಯಾಗುತ್ತಿವೆ. ಮಾಧ್ಯಮಗಳಲ್ಲಿ, ಸೋಷಿಯಲ್​ ಮೀಡಿಯಾಗಳಲ್ಲಿ ಚೆನ್ನೈನ ಈಗಿನ ಸನ್ನಿವೇಶದ ಹಲವು ವಿಡಿಯೋಗಳು ವೈರಲ್​ ಆಗುತ್ತಿವೆ. ಆದರೆ ಈ ಮಧ್ಯೆ, ಪ್ರಜ್ಞೆ ತಪ್ಪಿ ಬಿದ್ದಿರುವ ವ್ಯಕ್ತಿಯೊಬ್ಬನನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರಂತೂ ಕೊಂಡಾಡಿದ್ದಾರೆ. ಟಿಪಿ ಚತ್ರಂ ಎಂಬ ಪ್ರದೇಶದಲ್ಲಿರುವ ಸ್ಮಶಾನದಲ್ಲಿ ವ್ಯಕ್ತಿಯೊಬ್ಬ ಎಚ್ಚರವಿಲ್ಲದೆ ಬಿದ್ದಿದ್ದ. ಆತನನ್ನು ಮಹಿಳಾ ಅಧಿಕಾರಿ ಸ್ವತಃ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಟೋದಲ್ಲಿ ಮಲಗಿಸಿದ್ದಾರೆ. ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಸುರಿಯುತ್ತಿರುವ ಮಳೆಯ ಮಧ್ಯೆ ಆ ವ್ಯಕ್ತಿ ಅಸ್ವಸ್ಥನಾಗಿ ಬಿದ್ದಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಮತ್ತು ಕೆಲವರು ಅವನ ಬಳಿ ಹೋಗುತ್ತಾರೆ. ನಂತರ ರಾಜೇಶ್ವರಿಯವರು ಆತನನ್ನು ಎತ್ತಿ ತಮ್ಮ ಹೆಗಲ ಮೇಲೆ ಹಾಕಿಕೊಳ್ಳುತ್ತಾರೆ. ಅಲ್ಲಿಂದ ಕೆಲ ಮಾರು ದೂರ ಅವನನ್ನು ಹಾಗೇ ಹೊತ್ತುಕೊಂಡೇ ನಡೆಯುತ್ತಾರೆ. ಬಳಿಕ ಆಟೋದಲ್ಲಿ ಮಲಗಿಸುತ್ತಾರೆ. ಈತನ ಪ್ರಾಣವನ್ನು ಹೇಗಾದರೂ ರಕ್ಷಿಸಬೇಕು ಎಂದು ಅವರು ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.  ವಿಡಿಯೋ ನೋಡಿದ ನೆಟ್ಟಿಗರಂತೂ ರಾಜೇಶ್ವರಿಯವರನ್ನು ಪರಿಪರಿಯಾಗಿ ಹೊಗಳಿದ್ದಾರೆ.

ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ. ರಾಜ್ಯಾದ್ಯಂತ ಸುಮಾರು 11 ಎನ್​ಡಿಆರ್​ಎಫ್​ ಮತ್ತು 7 ಎಸ್​ಡಿಆರ್​ಎಫ್​ ತಂಡಗಳು ಸನ್ನದ್ಧರಾಗಿ ನಿಂತಿದ್ದಾರೆ. ಇಂದು ಸಂಜೆ ಕೂಡ ಚೆನ್ನೈನ ಉತ್ತರ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ರೆಡ್​ ಅಲರ್ಟ್ ಘೋಷಣೆಯಾಗಿದೆ.

ಇದನ್ನೂ ಓದಿ: Kuvempu Death Anniversay : ಕುವೆಂಪು ಅವರ ಮಕ್ಕಳ ಕಥೆ ‘ನರಿಗಳಿಗೇಕೆ ಕೋಡಿಲ್ಲ?’; ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ನೋಟ

Published On - 2:56 pm, Thu, 11 November 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ