AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ

Chennai Rains: ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ.

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ
ಎಚ್ಚರವಿಲ್ಲದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​
TV9 Web
| Edited By: |

Updated on:Nov 11, 2021 | 3:01 PM

Share

ಚೆನ್ನೈನಲ್ಲಿ ವಿಪರೀತ ಮಳೆ..(Chennai Rains)ಅನಾಹುತಗಳು ಸೃಷ್ಟಿಯಾಗುತ್ತಿವೆ. ಮಾಧ್ಯಮಗಳಲ್ಲಿ, ಸೋಷಿಯಲ್​ ಮೀಡಿಯಾಗಳಲ್ಲಿ ಚೆನ್ನೈನ ಈಗಿನ ಸನ್ನಿವೇಶದ ಹಲವು ವಿಡಿಯೋಗಳು ವೈರಲ್​ ಆಗುತ್ತಿವೆ. ಆದರೆ ಈ ಮಧ್ಯೆ, ಪ್ರಜ್ಞೆ ತಪ್ಪಿ ಬಿದ್ದಿರುವ ವ್ಯಕ್ತಿಯೊಬ್ಬನನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರಂತೂ ಕೊಂಡಾಡಿದ್ದಾರೆ. ಟಿಪಿ ಚತ್ರಂ ಎಂಬ ಪ್ರದೇಶದಲ್ಲಿರುವ ಸ್ಮಶಾನದಲ್ಲಿ ವ್ಯಕ್ತಿಯೊಬ್ಬ ಎಚ್ಚರವಿಲ್ಲದೆ ಬಿದ್ದಿದ್ದ. ಆತನನ್ನು ಮಹಿಳಾ ಅಧಿಕಾರಿ ಸ್ವತಃ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಟೋದಲ್ಲಿ ಮಲಗಿಸಿದ್ದಾರೆ. ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಸುರಿಯುತ್ತಿರುವ ಮಳೆಯ ಮಧ್ಯೆ ಆ ವ್ಯಕ್ತಿ ಅಸ್ವಸ್ಥನಾಗಿ ಬಿದ್ದಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಮತ್ತು ಕೆಲವರು ಅವನ ಬಳಿ ಹೋಗುತ್ತಾರೆ. ನಂತರ ರಾಜೇಶ್ವರಿಯವರು ಆತನನ್ನು ಎತ್ತಿ ತಮ್ಮ ಹೆಗಲ ಮೇಲೆ ಹಾಕಿಕೊಳ್ಳುತ್ತಾರೆ. ಅಲ್ಲಿಂದ ಕೆಲ ಮಾರು ದೂರ ಅವನನ್ನು ಹಾಗೇ ಹೊತ್ತುಕೊಂಡೇ ನಡೆಯುತ್ತಾರೆ. ಬಳಿಕ ಆಟೋದಲ್ಲಿ ಮಲಗಿಸುತ್ತಾರೆ. ಈತನ ಪ್ರಾಣವನ್ನು ಹೇಗಾದರೂ ರಕ್ಷಿಸಬೇಕು ಎಂದು ಅವರು ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.  ವಿಡಿಯೋ ನೋಡಿದ ನೆಟ್ಟಿಗರಂತೂ ರಾಜೇಶ್ವರಿಯವರನ್ನು ಪರಿಪರಿಯಾಗಿ ಹೊಗಳಿದ್ದಾರೆ.

ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ. ರಾಜ್ಯಾದ್ಯಂತ ಸುಮಾರು 11 ಎನ್​ಡಿಆರ್​ಎಫ್​ ಮತ್ತು 7 ಎಸ್​ಡಿಆರ್​ಎಫ್​ ತಂಡಗಳು ಸನ್ನದ್ಧರಾಗಿ ನಿಂತಿದ್ದಾರೆ. ಇಂದು ಸಂಜೆ ಕೂಡ ಚೆನ್ನೈನ ಉತ್ತರ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ರೆಡ್​ ಅಲರ್ಟ್ ಘೋಷಣೆಯಾಗಿದೆ.

ಇದನ್ನೂ ಓದಿ: Kuvempu Death Anniversay : ಕುವೆಂಪು ಅವರ ಮಕ್ಕಳ ಕಥೆ ‘ನರಿಗಳಿಗೇಕೆ ಕೋಡಿಲ್ಲ?’; ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ನೋಟ

Published On - 2:56 pm, Thu, 11 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ