ಮಹಿಳೆಯ ಮೇಲೆ ಅತ್ಯಾಚಾರವೆಸಗಿ,ಕೊಂದ ಆರೋಪಿಯನ್ನು ಥಳಿಸಿದ ಜನ

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಜನರು ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ಆಕೆಯ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಪಟಾಶ್‌ಪುರದ ಆಕೆಯ ಮನೆಯಿಂದ ಕರೆದೊಯ್ದಿದ್ದಾನೆ ಎಂದು ವರದಿಯಾಗಿದೆ.

ಮಹಿಳೆಯ ಮೇಲೆ ಅತ್ಯಾಚಾರವೆಸಗಿ,ಕೊಂದ ಆರೋಪಿಯನ್ನು ಥಳಿಸಿದ ಜನ
Image Credit source: Shutterstock
Follow us
ನಯನಾ ರಾಜೀವ್
|

Updated on: Oct 06, 2024 | 3:19 PM

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಜನರು ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ಆಕೆಯ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಪಟಾಶ್‌ಪುರದ ಆಕೆಯ ಮನೆಯಿಂದ ಕರೆದೊಯ್ದಿದ್ದಾನೆ ಎಂದು ವರದಿಯಾಗಿದೆ.

ಆ ವ್ಯಕ್ತಿ ತನ್ನ ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ, ನಂತರ ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹೊರಗೆ ಬಿಟ್ಟಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮದಾದ್ಯಂತ ಆಕೆಯ ಸಾವಿನ ಸುದ್ದಿ ಹರಡಿದ ನಂತರ ಗ್ರಾಮಸ್ಥರು ಆರೋಪಿಯ ಮನೆಗೆ ತೆರಳಿ ಬಿದಿರಿನ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ

ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಅಪ್ರಾಪ್ತ ಬಾಲಕನೊಬ್ಬ ತನ್ನ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಈಗ ಗರ್ಭಿಣಿ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್​ನ ಸೂರತ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.

ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ