AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ

ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಶಿವಸೇನೆ ಎಂಎಲ್​ಸಿ ತಿಳಿಸಿದ್ದಾರೆ.

Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 11, 2021 | 11:44 AM

Share

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ, ಟೆಂಪೋದ ಮೇಲೆ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಲಾಗಿದೆ. ರೇಪ್​ ಮಾಡಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಲಾಗಿದೆ. ರೇಪ್​ ನಡೆದ ಕೆಲವೇ ಹೊತ್ತಲ್ಲಿ ಆರೋಪಿ ಮೋಹನ್​ ಚೌಹಾಣ್​​ (45)ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ನಿನ್ನೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಪ್ರಜ್ಞೆ ಬಂದಿಲ್ಲ. ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಖೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸುತ್ತಿದ್ದಾನೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅವರು ಹೋಗುವಷ್ಟರಲ್ಲಿ ಆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಗಲೇ ಎಚ್ಚರ ತಪ್ಪಿದ್ದರು. ಕೂಡಲೇ ಮಹಿಳೆಯನ್ನು ರಾಜ್ವಾಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.  ಆ ಮಹಿಳೆ ಮೇಲೆ ಅತ್ಯಾಚಾರ ಆಗಿದ್ದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ಅಲ್ಲಿಯೇ ನಿಂತಿದ್ದ ಟೆಂಪೋ ಮೇಲೆ ಕೂಡ ರಕ್ತದ ಕಲೆ ಇದೆ ಎಂದು ಪೊಲೀಸರು ವರದಿ ನೀಡಿದ್ದಾರೆ.   ಈ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿರುವುದು ಗೊತ್ತಾಗಿದೆ. ಸದ್ಯ ಅರೆಸ್ಟ್ ಆಗಿರುವ ಆರೋಪಿಯೊಬ್ಬನೇ ಆತ್ಯಾಚಾರ ಮಾಡಿದ್ದಾನೋ, ಗ್ಯಾಂಗ್​ ರೇಪ್​ ಆಗಿದೆಯೋ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ತನಿಖೆ ನಡೆಸಲಾಗುವುದು ಎಂದೂ ಹೇಳಿದ್ದಾರೆ.

ಶಿವಸೇನೆ ಎಂಎಲ್​ಸಿ ಮನಿಶಾ ಕಯಂದೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮನಿಶಾ ತಿಳಿಸಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್​, ಈ ಘಟನೆ ಬಗ್ಗೆ ತುಂಬ ಶಾಕ್​ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಂಡನಿಗೆ 2 ಡೋಸ್​ ಲಸಿಕೆ ಆಗಿದೆ, ಇನ್ನೂ ಮನೆಯಲ್ಲಿದ್ದರೆ ನನಗೆ ಕಷ್ಟ; ವರ್ಕ್​ ಫ್ರಂ ಹೋಮ್​ ನಿಲ್ಲಿಸಿ ಎಂದು ಮನವಿ ಮಾಡಿದ ಹೆಂಡತಿ

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ