AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ

ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಶಿವಸೇನೆ ಎಂಎಲ್​ಸಿ ತಿಳಿಸಿದ್ದಾರೆ.

Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 11, 2021 | 11:44 AM

Share

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ, ಟೆಂಪೋದ ಮೇಲೆ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಲಾಗಿದೆ. ರೇಪ್​ ಮಾಡಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಲಾಗಿದೆ. ರೇಪ್​ ನಡೆದ ಕೆಲವೇ ಹೊತ್ತಲ್ಲಿ ಆರೋಪಿ ಮೋಹನ್​ ಚೌಹಾಣ್​​ (45)ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ನಿನ್ನೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಪ್ರಜ್ಞೆ ಬಂದಿಲ್ಲ. ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಖೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸುತ್ತಿದ್ದಾನೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅವರು ಹೋಗುವಷ್ಟರಲ್ಲಿ ಆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಗಲೇ ಎಚ್ಚರ ತಪ್ಪಿದ್ದರು. ಕೂಡಲೇ ಮಹಿಳೆಯನ್ನು ರಾಜ್ವಾಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.  ಆ ಮಹಿಳೆ ಮೇಲೆ ಅತ್ಯಾಚಾರ ಆಗಿದ್ದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ಅಲ್ಲಿಯೇ ನಿಂತಿದ್ದ ಟೆಂಪೋ ಮೇಲೆ ಕೂಡ ರಕ್ತದ ಕಲೆ ಇದೆ ಎಂದು ಪೊಲೀಸರು ವರದಿ ನೀಡಿದ್ದಾರೆ.   ಈ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿರುವುದು ಗೊತ್ತಾಗಿದೆ. ಸದ್ಯ ಅರೆಸ್ಟ್ ಆಗಿರುವ ಆರೋಪಿಯೊಬ್ಬನೇ ಆತ್ಯಾಚಾರ ಮಾಡಿದ್ದಾನೋ, ಗ್ಯಾಂಗ್​ ರೇಪ್​ ಆಗಿದೆಯೋ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ತನಿಖೆ ನಡೆಸಲಾಗುವುದು ಎಂದೂ ಹೇಳಿದ್ದಾರೆ.

ಶಿವಸೇನೆ ಎಂಎಲ್​ಸಿ ಮನಿಶಾ ಕಯಂದೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮನಿಶಾ ತಿಳಿಸಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್​, ಈ ಘಟನೆ ಬಗ್ಗೆ ತುಂಬ ಶಾಕ್​ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಂಡನಿಗೆ 2 ಡೋಸ್​ ಲಸಿಕೆ ಆಗಿದೆ, ಇನ್ನೂ ಮನೆಯಲ್ಲಿದ್ದರೆ ನನಗೆ ಕಷ್ಟ; ವರ್ಕ್​ ಫ್ರಂ ಹೋಮ್​ ನಿಲ್ಲಿಸಿ ಎಂದು ಮನವಿ ಮಾಡಿದ ಹೆಂಡತಿ

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ