AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ನ ಶಿವ ದೇವಾಲಯವೆಂದು ಕರೆದು ಗಂಗಾಜಲ ಸಿಂಪಡಿಸಲು ಹೋಗಿದ್ದ ಮಹಿಳೆ

ತಾಜ್​ಮಹಲ್​ನ್ನು ಶಿವನ ದೇವಾಲಯವೆಂದು ಕರೆದ ಮಹಿಳೆಯೊಬ್ಬರು ಗಂಗಾಜಲವನ್ನು ಸಿಂಪಡಿಸಲು ಹೋಗಿ ವಿವಾದ ಹುಟ್ಟುಹಾಕಿದ್ದಾರೆ. ಕನ್ವರ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ಗಂಗಾ ನದಿಯ ಪವಿತ್ರ ಜಲವನ್ನು ತೆಗೆದುಕೊಂಡು ಬಂದು ತಾಜ್​ಮಹಲ್​ಗೆ ಸಿಂಪಡಿಸಲು ಮುಂದಾಗಿದ್ದರು.

ತಾಜ್​ಮಹಲ್​ನ ಶಿವ ದೇವಾಲಯವೆಂದು ಕರೆದು ಗಂಗಾಜಲ ಸಿಂಪಡಿಸಲು ಹೋಗಿದ್ದ ಮಹಿಳೆ
ಗಂಗಾಜಲImage Credit source: India.com
ನಯನಾ ರಾಜೀವ್
|

Updated on: Jul 30, 2024 | 10:05 AM

Share

ಮಹಿಳೆಯೊಬ್ಬರು ತಾಜ್​ಮಹಲ್​ಗೆ ಗಂಗಾಜಲವನ್ನು ಸಿಂಪಡಿಸಲು ಹೋಗಿ ವಿವಾದ ಹುಟ್ಟುಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಕನ್ವರ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ಗಂಗಾ ನದಿಯ ಪವಿತ್ರ ಜಲವನ್ನು ತೆಗೆದುಕೊಂಡು ಬಂದು ತಾಜ್​ಮಹಲ್​ಗೆ ಸಿಂಪಡಿಸಲು ಮುಂದಾಗಿದ್ದರು.

ತಾಜ್​ಮಹಲ್​ನ್ನು ಶಿವನಿಗೆ ಸಮರ್ಪಿತವಾದ ದೇವಾಲಯ ಎಂದು ಕರೆದು ಅದಕ್ಕೆ ಸಿಂಪಡಿಸಲು ಮುಂದಾಗಿದ್ದರು. ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷರಾದ ಮೀನು ರಾಥೋಡ್ ಎಂದು ಗುರುತಿಸಿಕೊಂಡ ಮಹಿಳೆ ವಿವಾದಕ್ಕೊಳಗಿದ್ದಾರೆ.

ಆದರೆ ಭದ್ರತೆಗೆಂದು ನಿಯೋಜಿಸಲಾಗಿದ್ದ ತಾಜ್ ಸುರಕ್ಷಾ ಪೊಲೀಸರು ಅವರನ್ನು ತಡೆದಿದ್ದಾರೆ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದ್ದಾರೆ ಎಂದು ಎಸಿಪಿ ಸೈಯದ್ ಅರೀಬ್ ಅಹ್ಮದ್ ತಿಳಿಸಿದ್ದಾರೆ.

ಮತ್ತಷ್ಟು ಓದಿ:ಕನ್ವರ್ ಮಾರ್ಗದಲ್ಲಿ ಅಂಗಡಿಗಳಲ್ಲಿ ಹೆಸರು ಪ್ರದರ್ಶನ; ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂಕೋರ್ಟ್

ತಾಜ್​ಮಹಲ್​ ಅನ್ನು ತೇಜೋ ಮಹಾಲಯ ಎಂದು ಅವರು ಉದ್ಘರಿಸಿದ್ದು, ಇದು ಶಿವನಿಗೆ ಸಮರ್ಪಿತವಾಗಿ ದೇವಾಯಲವಾಗಿದ್ದು, ಗಂಗಾಜಲ ಸಿಂಪಡಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನು ಪ್ರಾಚೀನ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದರು.

ವಿಶ್ವದ ಏಳು ಅದ್ಭುತಗಳಲ್ಲಿ ಹೆಸರಾಗಿರುವ ತಾಜ್ ಮಹಲ್ ಉತ್ತರ ಪ್ರದೇಶದ ಆಗ್ರಾದ ಯಮುನಾ ನದಿಯ ದಡದಲ್ಲಿರುವ ದಂತ-ಬಿಳಿ ಅಮೃತಶಿಲೆಯ ಸಮಾಧಿಯಾಗಿದೆ. ಕ್ರಿ.ಶ. 1631 ರಲ್ಲಿ ಐದನೇ ಮೊಘಲ್ ಚಕ್ರವರ್ತಿ ಷಹಜಹಾನ್ ತನ್ನ ಪತ್ನಿ ಮುಮ್ತಾಜ್ ಮಹಲ್ ಸಮಾಧಿಯನ್ನು ಇರಿಸಲು ಐಕಾನಿಕ್ ಸ್ಮಾರಕವನ್ನು ಕಟ್ಟಿಸಿದ್ದ.

ಈ ಸಂಕೀರ್ಣವನ್ನು ಸುಮಾರು 42 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದು, ಸಮಾಧಿಯು ಅದರ ಕೇಂದ್ರಬಿಂದುವಾಗಿದೆ. ಸಂಕೀರ್ಣವು ಮಸೀದಿ ಮತ್ತು ಅತಿಥಿ ಗೃಹವನ್ನು ಸಹ ಒಳಗೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್