AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿತಾಯದ ಹಣವನ್ನೆಲ್ಲ ಪತಿಗಾಗಿ ಖಾಲಿ ಮಾಡಿ, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮಹಿಳೆ; ಮನಕಲಕುವ ಮನವಿ ಇದು..

ಸಮಾನತೆ, ನ್ಯಾಯದ ಆಧಾರದ ಮೇಲೆ ನಾನು ಪಿಎಂ ಕೇರ್ಸ್​ನಿಂದ ಹಣ ಪಡೆಯಲು ಅರ್ಹನಾಗಿದ್ದೇನೆ. ನನ್ನ ಪತಿಯ ಜೀವ ಉಳಿಸಲು ಸರ್ಕಾರದಿಂದ ಕಾನೂನುಬದ್ಧ ಸಹಾಯದ ನಿರೀಕ್ಷೆ ಹೊಂದಿದ್ದೇನೆ ಎಂದು ಮಹಿಳೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಉಳಿತಾಯದ ಹಣವನ್ನೆಲ್ಲ ಪತಿಗಾಗಿ ಖಾಲಿ ಮಾಡಿ, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮಹಿಳೆ; ಮನಕಲಕುವ ಮನವಿ ಇದು..
ಸುಪ್ರೀಂ ಕೋರ್ಟ್​
TV9 Web
| Edited By: |

Updated on: Aug 10, 2021 | 6:12 PM

Share

ತನ್ನ ಉಳಿತಾಯದ ಹಣವನ್ನೆಲ್ಲ ಪತಿಗಾಗಿ ಖಾಲಿ ಮಾಡಿದ ಮಹಿಳೆಯೊಬ್ಬಳು, ತನಗೆ ಪಿಎಂ ಕೇರ್ಸ್ (PM CARES)​ ಮತ್ತು ತನ್ನ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣಕಾಸಿನ ನೆರವು ಕೊಡಿಸುವಂತೆ ಸುಪ್ರಿಂಕೋರ್ಟ್(Supreme Court)​ಗೆ ಮನವಿ ಮಾಡಿದ್ದಾರೆ. ಇದೊಂದು ಮನಕಲಕುವ ಘಟನೆಯಾಗಿದ್ದು, ಸದ್ಯ ಈ ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ನಾಳೆಗೆ ಮುಂದೂಡಿದೆ. ನಾನು ಉಳಿತಾಯದ ಹಣವನ್ನೆಲ್ಲ ಪತಿಯ ಚಿಕಿತ್ಸೆಗೆ ವ್ಯಯಿಸಿದೆ. ಅವರು ಕೊವಿಡ್​ 19 (Covid 19) ಗೆ ಒಳಗಾಗಿ ಗುಣಮುಖರಾದ ನಂತರ ತುಂಬ ಅನಾರೋಗ್ಯವಾಯಿತು. ನನ್ನಲ್ಲಿದ್ದ ಹಣವೆಲ್ಲ ಖಾಲಿಯಾಗಿದೆ. ಈಗ ನನ್ನ ಪತಿಗೆ ಶ್ವಾಸಕೋಶ ಕಸಿ ಮಾಡಬೇಕಾಗಿದೆ. ಅದಕ್ಕಾಗಿ ನನಗೆ ಪಿಎಂ ಕೇರ್ಸ್​ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ಕೋಟಿ ರೂಪಾಯಿ ಕೊಡಿಸಿ ಎಂದು ಸುಪ್ರೀಂಗೆ ಸಲ್ಲಿಸಿದ ಅರ್ಜಿಯಲ್ಲಿ ಮಹಿಳೆ ಮನವಿ ಮಾಡಿದ್ದಾರೆ. ​

ಇಂದಿನ ವಿಚಾರಣೆ ವೇಳೆ ಸಾಲಿಸಿಟರ್​ ಜನರಲ್​ ತುಷಾರ್ ಮೆಹ್ತಾ, ತಮಗೊಂದು ಅರ್ಜಿಯ ಪ್ರತಿ ನೀಡುವಂತೆ ಕೋರಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಎಲ್​.ಎನ್​.ರಾವ್​ ಮತ್ತು ಅನಿರುದ್​ ಬೋಸ್​ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಮನವಿಗೆ ಸಂಬಂಧಪಟ್ಟಂತೆ ನಾವು ಏನೂ ಮಾಡಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ಏನಾದರೂ ಮಾಡಲು ಸಾಧ್ಯವೇ ಎಂಬುದನ್ನು ಪ್ರಶ್ನಿಸಿ, ಆಗಸ್ಟ್​ 6ರಂದು ಒಂದು ನೋಟಿಸ್​ ನೀಡಿದ್ದಾಗಿ ಅರ್ಜಿದಾರ ಮಹಿಳೆಗೆ ತಿಳಿಸಿದೆ. ಈ ಬಗ್ಗೆ ಸಾಲಿಸಿಟರ್ ಜನರಲ್​ಗೂ ತಿಳಿಸಿದ ಎಲ್​.ಎನ್​.ರಾವ್​, ನಿಮಗೆ ಖಂಡಿತ ಅರ್ಜಿಯ ಮನವಿಯನ್ನು ನೀಡುತ್ತೇವೆ ಎಂದಿದ್ದಾರೆ.

ಸಮಾನತೆ, ನ್ಯಾಯದ ಆಧಾರದ ಮೇಲೆ ನಾನು ಪಿಎಂ ಕೇರ್ಸ್​ನಿಂದ ಹಣ ಪಡೆಯಲು ಅರ್ಹನಾಗಿದ್ದೇನೆ. ನನ್ನ ಪತಿಯ ಜೀವ ಉಳಿಸಲು ಸರ್ಕಾರದಿಂದ ಕಾನೂನುಬದ್ಧ ಸಹಾಯದ ನಿರೀಕ್ಷೆ ಹೊಂದಿದ್ದೇನೆ ಎಂದು ಮಹಿಳೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಕೊವಿಡ್​ 19 ಪರಿಸ್ಥಿತಿ ಇದೆ. ನನ್ನ ಪತಿಯೂ ಕೊವಿಡ್​ 19 ಸೋಂಕಿನಿಂದಲೇ ಸಂಕಷ್ಟಪಡುತ್ತಿದ್ದಾರೆ. ಅವರಿಗೀಗ ಚಿಕಿತ್ಸೆ, ಶ್ವಾಸಕೋಶ ಕಸಿ, ಔಷಧಗಳಿಗಾಗಿ ಸುಮಾರು 1 ಕೋಟಿ ರೂಪಾಯಿ ನೆರವು ಬೇಕಾಗಿದೆ. ಪತಿಯ ಜೀವ ಉಳಿಸಲು ಸರ್ಕಾರ ಅಗತ್ಯ ಹಣಕಾಸಿನ ನೆರವು ನೀಡದೆ ಇದ್ದರೆ ಅದು ಸಂವಿಧಾನದ 14 ಮತ್ತು 21ನೇ ವಿಧಿಯ ಉಲ್ಲಂಘನೆಯಾಗುತ್ತದೆ. ನಾಗರಿಕರಿಗೆ ಸಮರ್ಪಕ ಆರೋಗ್ಯ ಸೌಲಭ್ಯ ಒದಗಿಸಬೇಕು ಎಂದೇ ಆ ವಿಧಿಗಳು ಸಾರುತ್ತವೆ ಎಂದೂ ಸಹ ಮಹಿಳೆ ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್ 2019ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರಗಿನ ಇಬ್ಬರು ಮಾತ್ರ ಆಸ್ತಿ ಖರೀದಿಸಿದ್ದಾರೆ: ಕೇಂದ್ರ ಗೃಹ ಸಚಿವಾಲಯ

ಜೀವರಕ್ಷಕ ವ್ಯವಸ್ಥೆಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್​ ಆಟಗಾರ ಕ್ರಿಸ್​ ಕೈರ್ನ್ಸ್​

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?