AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರುಮನೆ ಆಸ್ತಿಗಾಗಿ ಸಹೋದರಿಯರ ಕಾದಾಟ; ತಂಗಿಗೆ ಬೆಂಕಿ ಹಚ್ಚಿ ಕೊಂದು, ತಾನೂ ಆಸ್ಪತ್ರೆ ಸೇರಿರುವ ಅಕ್ಕ

ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಬಂದಿದ್ದಾಳೆ. ಜಮೀನು ವಿಚಾರ ಚರ್ಚಿಸುವ ಸಲುವಾಗಿಯೇ ಬಂದಿದ್ದರೂ, ಮಾತುಕತೆಯೆಂಬುದು ಬರುಬರುತ್ತ ಜಗಳಕ್ಕೆ ತಿರುಗಿದೆ.

ತವರುಮನೆ ಆಸ್ತಿಗಾಗಿ ಸಹೋದರಿಯರ ಕಾದಾಟ; ತಂಗಿಗೆ ಬೆಂಕಿ ಹಚ್ಚಿ ಕೊಂದು, ತಾನೂ ಆಸ್ಪತ್ರೆ ಸೇರಿರುವ ಅಕ್ಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 03, 2022 | 9:47 AM

Share

ದಾಯವಾದಿ ಕಲಹ ಹೊಸದಲ್ಲ. ಆಸ್ತಿ, ದುಡ್ಡಿಗಾಗಿ ದಾಯಾದಿಗಳ ಮಧ್ಯೆ ಹೊಡೆದಾಟ, ಕೊಲೆಯಂಥ ಕೃತ್ಯಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಇಂಥದ್ದನ್ನೆಲ್ಲ ಮಾಡಿ ಸಿಕ್ಕಿಬೀಳುವವರು ಪುರುಷರು. ಆದರೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಇಂಥ ದುಷ್ಕೃತ್ಯ ನಡೆಸಿದ್ದಾರೆ.  ರಾಜೇಶ್ವರಿ  ಎಂಬಾಕೆ  ಆಸ್ತಿಗಾಗಿ ತನ್ನ ಸಹೋದರಿಗೇ ಬೆಂಕಿ ಹಚ್ಚಿ ಕೊಂದಿದ್ದಾಳೆ.   ಮೃತ ಮಹಿಳೆ ಹೆಸರು ವರಲಕ್ಷ್ಮೀ ಎಂದಾಗಿದ್ದು, ಆಕೆಗೆ 36ವರ್ಷ.

ವರಲಕ್ಷ್ಮೀ ಎಂಬಾಕೆ ವಾಡಿಯಾರಾಮ್​ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಪತಿ ಕೆಲವು ವರ್ಷಗಳ ಹಿಂದೆಯೇ ದೂರಾವಾಗಿದ್ದಾರೆ. ಈಕೆಗೆ ರಾಜೇಶ್ವರಿ ಎಂಬ ತಂಗಿ ಇದ್ದು, ಅವಳೂ ವಿಚ್ಛೇದಿತಳು.  ಇವರಿಬ್ಬರೂ ಸ್ವಂತ ಅಕ್ಕ-ತಂಗಿಯರಾಗಿದ್ದು, ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದೆ. ಈ ಸಹೋದರಿಯರ ಪಾಲಕರ ಬಳಿ 5 ಎಕರೆಗಳಷ್ಟು ಭೂಮಿಯಿದೆ. ಆ ಐದು ಎಕರೆ ಭೂಮಿ ಹಂಚಿಕೊಳ್ಳುವ ಸಂಬಂಧ ವರಲಕ್ಷ್ಮೀ ಮತ್ತು ರಾಜೇಶ್ವರಿ ಮಧ್ಯೆ ವಿದಾದ ಇತ್ತು ಎಂದು ಚೆಗುಂಟಾ ಪೊಲೀಸರು ತಿಳಿಸಿದ್ದಾರೆ. ​

ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಬಂದಿದ್ದಾಳೆ. ಜಮೀನು ವಿಚಾರ ಚರ್ಚಿಸುವ ಸಲುವಾಗಿಯೇ ಬಂದಿದ್ದರೂ, ಮಾತುಕತೆಯೆಂಬುದು ಬರುಬರುತ್ತ ಜಗಳಕ್ಕೆ ತಿರುಗಿದೆ. ಈ ರಾಜೇಶ್ವರಿಯಂತೂ ಕೈಯಲ್ಲಿ ಪೆಟ್ರೋಲ್​ ಬಾಟಲಿ ಹಿಡಿದೇ ಬಂದಿದ್ದಳು. ಇಬ್ಬರೂ ಜಗಳವಾಡಿಕೊಂಡ ಬಳಿಕ ರಾಜೇಶ್ವರಿ ತನ್ನ ಅಕ್ಕನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ತೀವ್ರವಾಗಿ ಗಾಯಗೊಂಡ ವರಲಕ್ಷ್ಮಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅವರು ಬದುಕುಳಿಯಲಿಲ್ಲ ಎಂದೂ ಪೊಲಿಸರು ಮಾಹಿತಿ ನೀಡಿದ್ದಾರೆ.  ಇತ್ತ ರಾಜೇಶ್ವರಿ ಕೂಡ ಸುಟ್ಟುಕೊಂಡಿದ್ದಾರೆ. ಶೇ.80ರಷ್ಟು ಸುಟ್ಟುಕೊಂಡಿರುವ ಈಕೆ ಕೂಡ ಬದುಕುವ ಸಾಧ್ಯತೆ ಕಡಿಮೆಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ವಾರದ ಅಂತ್ಯಕ್ಕೆ ಬಿಡಬ್ಲ್ಯೂಎಸ್ಎಸ್​ಬಿ ಹಾಗೂ ಬೆಸ್ಕಾಂ ವಿರುದ್ಧ 13 ಎಫ್ ಐಆರ್ ದಾಖಲಿಸಲು ಬಿಬಿಎಂಪಿ ತೀರ್ಮಾನ

Published On - 9:45 am, Thu, 3 February 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ