AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರುಮನೆ ಆಸ್ತಿಗಾಗಿ ಸಹೋದರಿಯರ ಕಾದಾಟ; ತಂಗಿಗೆ ಬೆಂಕಿ ಹಚ್ಚಿ ಕೊಂದು, ತಾನೂ ಆಸ್ಪತ್ರೆ ಸೇರಿರುವ ಅಕ್ಕ

ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಬಂದಿದ್ದಾಳೆ. ಜಮೀನು ವಿಚಾರ ಚರ್ಚಿಸುವ ಸಲುವಾಗಿಯೇ ಬಂದಿದ್ದರೂ, ಮಾತುಕತೆಯೆಂಬುದು ಬರುಬರುತ್ತ ಜಗಳಕ್ಕೆ ತಿರುಗಿದೆ.

ತವರುಮನೆ ಆಸ್ತಿಗಾಗಿ ಸಹೋದರಿಯರ ಕಾದಾಟ; ತಂಗಿಗೆ ಬೆಂಕಿ ಹಚ್ಚಿ ಕೊಂದು, ತಾನೂ ಆಸ್ಪತ್ರೆ ಸೇರಿರುವ ಅಕ್ಕ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Feb 03, 2022 | 9:47 AM

Share

ದಾಯವಾದಿ ಕಲಹ ಹೊಸದಲ್ಲ. ಆಸ್ತಿ, ದುಡ್ಡಿಗಾಗಿ ದಾಯಾದಿಗಳ ಮಧ್ಯೆ ಹೊಡೆದಾಟ, ಕೊಲೆಯಂಥ ಕೃತ್ಯಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಇಂಥದ್ದನ್ನೆಲ್ಲ ಮಾಡಿ ಸಿಕ್ಕಿಬೀಳುವವರು ಪುರುಷರು. ಆದರೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಇಂಥ ದುಷ್ಕೃತ್ಯ ನಡೆಸಿದ್ದಾರೆ.  ರಾಜೇಶ್ವರಿ  ಎಂಬಾಕೆ  ಆಸ್ತಿಗಾಗಿ ತನ್ನ ಸಹೋದರಿಗೇ ಬೆಂಕಿ ಹಚ್ಚಿ ಕೊಂದಿದ್ದಾಳೆ.   ಮೃತ ಮಹಿಳೆ ಹೆಸರು ವರಲಕ್ಷ್ಮೀ ಎಂದಾಗಿದ್ದು, ಆಕೆಗೆ 36ವರ್ಷ.

ವರಲಕ್ಷ್ಮೀ ಎಂಬಾಕೆ ವಾಡಿಯಾರಾಮ್​ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಪತಿ ಕೆಲವು ವರ್ಷಗಳ ಹಿಂದೆಯೇ ದೂರಾವಾಗಿದ್ದಾರೆ. ಈಕೆಗೆ ರಾಜೇಶ್ವರಿ ಎಂಬ ತಂಗಿ ಇದ್ದು, ಅವಳೂ ವಿಚ್ಛೇದಿತಳು.  ಇವರಿಬ್ಬರೂ ಸ್ವಂತ ಅಕ್ಕ-ತಂಗಿಯರಾಗಿದ್ದು, ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದೆ. ಈ ಸಹೋದರಿಯರ ಪಾಲಕರ ಬಳಿ 5 ಎಕರೆಗಳಷ್ಟು ಭೂಮಿಯಿದೆ. ಆ ಐದು ಎಕರೆ ಭೂಮಿ ಹಂಚಿಕೊಳ್ಳುವ ಸಂಬಂಧ ವರಲಕ್ಷ್ಮೀ ಮತ್ತು ರಾಜೇಶ್ವರಿ ಮಧ್ಯೆ ವಿದಾದ ಇತ್ತು ಎಂದು ಚೆಗುಂಟಾ ಪೊಲೀಸರು ತಿಳಿಸಿದ್ದಾರೆ. ​

ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಬಂದಿದ್ದಾಳೆ. ಜಮೀನು ವಿಚಾರ ಚರ್ಚಿಸುವ ಸಲುವಾಗಿಯೇ ಬಂದಿದ್ದರೂ, ಮಾತುಕತೆಯೆಂಬುದು ಬರುಬರುತ್ತ ಜಗಳಕ್ಕೆ ತಿರುಗಿದೆ. ಈ ರಾಜೇಶ್ವರಿಯಂತೂ ಕೈಯಲ್ಲಿ ಪೆಟ್ರೋಲ್​ ಬಾಟಲಿ ಹಿಡಿದೇ ಬಂದಿದ್ದಳು. ಇಬ್ಬರೂ ಜಗಳವಾಡಿಕೊಂಡ ಬಳಿಕ ರಾಜೇಶ್ವರಿ ತನ್ನ ಅಕ್ಕನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ತೀವ್ರವಾಗಿ ಗಾಯಗೊಂಡ ವರಲಕ್ಷ್ಮಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅವರು ಬದುಕುಳಿಯಲಿಲ್ಲ ಎಂದೂ ಪೊಲಿಸರು ಮಾಹಿತಿ ನೀಡಿದ್ದಾರೆ.  ಇತ್ತ ರಾಜೇಶ್ವರಿ ಕೂಡ ಸುಟ್ಟುಕೊಂಡಿದ್ದಾರೆ. ಶೇ.80ರಷ್ಟು ಸುಟ್ಟುಕೊಂಡಿರುವ ಈಕೆ ಕೂಡ ಬದುಕುವ ಸಾಧ್ಯತೆ ಕಡಿಮೆಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ವಾರದ ಅಂತ್ಯಕ್ಕೆ ಬಿಡಬ್ಲ್ಯೂಎಸ್ಎಸ್​ಬಿ ಹಾಗೂ ಬೆಸ್ಕಾಂ ವಿರುದ್ಧ 13 ಎಫ್ ಐಆರ್ ದಾಖಲಿಸಲು ಬಿಬಿಎಂಪಿ ತೀರ್ಮಾನ

Published On - 9:45 am, Thu, 3 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?