AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಮನೆಗೆ ಬಂದ ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿ ರಸ್ತೆಗೆ ಎಸೆದ ಯುವತಿ

ಬಿಹಾರದ ಬಕ್ಸಾರ್‌ನಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿ, ರಸ್ತೆಯಲ್ಲಿ ಎಸೆದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಇದೀಗ ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಬಿಹಾರ: ಮನೆಗೆ ಬಂದ ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿ ರಸ್ತೆಗೆ ಎಸೆದ ಯುವತಿ
ಅಪರಾಧ
Follow us
ನಯನಾ ರಾಜೀವ್
|

Updated on: Mar 05, 2024 | 12:28 PM

ಯುವತಿಯೊಬ್ಬಳು ತನ್ನ ಪ್ರಯಕರನ ಗುಪ್ತಾಂಗವನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತ ಸತ್ತಿದ್ದಾನೆ ಎಂದು ತಿಳಿದು ಅಲ್ಲಿಂದ ಓಡಿ ಹೋಗಿದ್ದಾಳೆ. ಬಳಿಕ ಅಲ್ಲಿದ್ದವರೆಲ್ಲ ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರ ಚಿಕಿತ್ಸೆ ನಡೆಯುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಯುವತಿಯ ಈ ನಿರ್ಧಾರಕ್ಕೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯುವಕನ ಸಹೋದರ ಪ್ರಮೋದ್ ಕುಮಾರ್ ಚೌಧರಿ ಮಾತನಾಡಿ, ಅನಿಲ್ ತನ್ನ ಪ್ರೇಯಸಿ ಮನೆಗೆ ಕರೆದಿದ್ದಾಳೆ ಎಂದು ಹೇಳಿ ಹೋಗಿದ್ದ ಎಂದು ತಿಳಿಸಿದ್ದಾರೆ. ಅನಿಲ್ ತನ್ನ ಮನೆಗೆ ಬಂದಾಗ, ಯುವತಿ ಆತನ ಮೇಲೆ ಹಲ್ಲೆ ನಡೆಸಿ, ಆತನ ಖಾಸಗಿ ಅಂಗಗಳನ್ನು ಕತ್ತರಿಸಿ ತನ್ನ ಮನೆಯ ಹೊರಗಿನ ರಸ್ತೆಯಲ್ಲಿ ಎಸೆದಿದ್ದಾಳೆ.

ತೀವ್ರ ನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಯಾರದ್ದೋ ಸಹಾಯದಿಂದ ಆಸ್ಪತ್ರೆಯನ್ನು ತಲುಪುವಲ್ಲಿ ಯಶಸ್ವಿಯಾದರು, ಅಲ್ಲಿ ಅವರು ತಮ್ಮ ಕುಟುಂಬವನ್ನು ಸಂಪರ್ಕಿಸಿ ಘಟನೆಯ ಬಗ್ಗೆ ತಿಳಿಸಿದರು.

ಸಂತ್ರಸ್ತೆಯನ್ನು ಬಕ್ಸಾರ್‌ನ ವಿಕೆ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಡುಮ್ರಾನ್ ಪೊಲೀಸ್ ಅಧಿಕಾರಿ ಅನಿಶಾ ರಾಣಾ ಹೇಳಿದ್ದಾರೆ. ಯುವಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ:ಕೇರಳ ಬಸ್​ನಲ್ಲಿ ನಟಿಗೆ ಗುಪ್ತಾಂಗ ತೋರಿಸಿ ಜೈಲು ಪಾಲಾದ ಯುವಕ ಜಾಮೀನಿನ ಮೇಲೆ ಬಿಡುಗಡೆ, ಹೂವಿನ ಮಾಲೆ ಹಾಕಿ ಸ್ವಾಗತ

ಮತ್ತೊಂದು ಘಟನೆ ಕೋಪದಲ್ಲಿ ಪತ್ನಿ ಕೊಂದು 3 ದಿನಗಳ ಕಾಲ ಶವದ ಜತೆಯಲ್ಲೇ ಇದ್ದ ಪತಿ ಕೋಪದಲ್ಲಿ ಪತ್ನಿಯನ್ನು ಕೊಂದು 3 ದಿನಗಳ ಕಾಲ ಶವದ ಜತೆಯೆಲ್ಲೇ ಇದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಫೆಬ್ರವರಿ 27ರಂದು ಘಟನೆ ನಡೆದಿದ್ದು, ಮಾರ್ಚ್​ 1ರಂದು ಬೆಳಕಿಗೆ ಬಂದಿದೆ, ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರು ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಮನೆಗೆ ಬಂದು ವಿಚಾರಣೆ ನಡೆಸಿದಾಗ ಕೋಣೆಯಲ್ಲಿ ಶವ ಪತ್ತೆಯಾಗಿತ್ತು. ಆರೋಪಿ ಭರತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಭರತ್ ಪತಿ ಜತೆ ಜಗಳವಾಡಿದ್ದ ಕೋಪದಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ, ಭರತ್ ಮೂರು ದಿನಗಳ ಕಾಲ ಶವದೊಂದಿಗೆ ಮನೆಯಲ್ಲಿಯೇ ಇದ್ದ. ಬಳಿಕ ಪತ್ನಿ ಸುನಿತಾಳ ದೇಹವನ್ನು ಹಾಸಿಗೆಯ ಮೇಲೆ ಮಲಗಿಸಿ ಶುಕ್ರವಾರವಷ್ಟೇ ಕೆಲಸಕ್ಕೆಂದು ಕಚೇರಿಗೆ ಹೋಗಿದ್ದ. ಶನಿವಾರ ಅಕ್ಕಪಕ್ಕದ ಮನೆಯವರು ಈ ಮನೆಯಿಂದ ವಾಸನೆ ಬರುತ್ತಿರುವುದನ್ನು ಪತ್ತೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುನಿತಾ ಅವರ ದೇಹವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ವ್ಯವಸ್ಥೆ ಮಾಡಿದರು. ಎರಡೂವರೆ ವರ್ಷಗಳ ಹಿಂದೆ ಅಧಿಕೃತವಾಗಿ ಮದುವೆಯಾಗುವ ಮೊದಲು ಇಬ್ಬರಿಗೂ ಬೇರೊಂದು ಮದುವೆಯಾಗಿತ್ತು.

ಭರತ್ ತನ್ನ ಮಾಜಿ ಪತ್ನಿಗೆ ನಿರಂತರ ಆರ್ಥಿಕ ಬೆಂಬಲ ನೀಡಿದ್ದರಿಂದ ಅವರ ಸಂಬಂಧದಲ್ಲಿ ತೊಡಕುಗಳು ಉದ್ಭವಿಸಿದವು, ಇದು ಅವನ ಮತ್ತು ಸುನೀತಾ ನಡುವೆ ಆಗಾಗ್ಗೆ ಭಿನ್ನಾಭಿಪ್ರಾಯಗಳಿಗೆ ಕಾರಣವಾಯಿತು. ಫೆಬ್ರವರಿ 27 ರಂದು ನಡೆದ ಮಾರಣಾಂತಿಕ ಘರ್ಷಣೆ ಮಹಿಳೆಯ ಕೊಲೆಯಲ್ಲಿ ಅಂತ್ಯಗೊಂಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್