AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 22, 2022 | 4:05 PM

Share

ಬ್ಯಾಂಕ್​​ನಲ್ಲಿ ಹಣ ಠೇವಣಿ ಇಡಲು ಬಂದ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಸ್ನೇಹಿತ ಸೇರಿ ಕುಡುಗೋಲು, ಚಾಕುವಿನಿಂದ ಇರಿದಿದ್ದಾರೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಹಿಳೆಯನ್ನು ಪ್ರೇಮಲತಾ ಎಂದು ಗುರುತಿಸಲಾಗಿದ್ದು, ಇವರ ಪತಿಯ ಹೆಸರು ವೆಲೈಚಾಮಿ.  ಬ್ಯಾಂಕ್​​ನೊಳಗೇ ಆಕೆಗೆ ಚಾಕುವಿನಿಂದ ಹಲ್ಲೆ ಮಾಡಿ ಇಬ್ಬರೂ ಓಡಿಹೋಗಿದ್ದಾರೆ. ಆರೋಪಿಗಳನ್ನು ಹಿಡಿಯಲು ಬ್ಯಾಂಕ್​ ಸಿಬ್ಬಂದಿ ಮತ್ತು ಅಲ್ಲಿಯೇ ಇದ್ದ ಇತರರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಇಂಡಿಯಾ ಟುಡೆ ವರದಿಯಲ್ಲಿ ತಿಳಿಸಿದೆ.  ಹಲ್ಲೆಗೊಳಗಾಗಿ ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅನಿರೀಕ್ಷಿತವಾಗಿ ನಡೆದ ಈ ಘಟನೆ ನೋಡಿ ಇಡೀ ಬ್ಯಾಂಕ್​ ಬೆಚ್ಚಿಬಿದ್ದಿದೆ.

ದಂಪತಿ ಒಟ್ಟಿಗೇ ಇರಲಿಲ್ಲ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಪ್ರೇಮಲತಾ ಮತ್ತು  ವೆಲೈಚಾಮಿ ಒಟ್ಟಿಗೇ ಇರಲಿಲ್ಲ. ಮದುವೆಯಾಗಿ ಕೆಲ ವರ್ಷಗಳ ಬಳಿಕ ವೆಲೈಚಾಮಿಗೆ ಪತ್ನಿಯ ಮೇಲೆ ಅನುಮಾನ ಶುರುವಾಯಿತು. ಆಕೆ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ.  ನಂತರ ಇಬ್ಬರೂ ಪ್ರತ್ಯೇಕವಾಗಿದ್ದರೂ ಕೂಡ ವೆಲೈಚಾಮಿ ದುಡ್ಡಿಗಾಗಿ ಅವಳ ಬೆನ್ನುಬಿದ್ದಿದ್ದ. ಅವಳ ಆಸ್ತಿಯನ್ನು ತನಗೇ ಕೊಡುವಂತೆ ಒತ್ತಡ ತರುತ್ತಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಬ್ಯಾಂಕ್​​ನಲ್ಲಿ ಘಟನೆ ನಡೆದಾಗ ಇದ್ದ ಗ್ರಾಹಕರಲ್ಲಿ ಒಬ್ಬರು ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದು, ಅದನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ನೆಲ ಜಲ ವಿಚಾರದಲ್ಲಿ ನಾವೆಲ್ಲಾ ಒಂದು: ಮೇಕೆದಾಟು ಯೋಜನೆಗಾಗಿ ತೊಡೆತಟ್ಟಿದ ಸರ್ವಪಕ್ಷಗಳ ನಾಯಕರು!

Published On - 4:05 pm, Tue, 22 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!