AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 22, 2022 | 4:05 PM

Share

ಬ್ಯಾಂಕ್​​ನಲ್ಲಿ ಹಣ ಠೇವಣಿ ಇಡಲು ಬಂದ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಸ್ನೇಹಿತ ಸೇರಿ ಕುಡುಗೋಲು, ಚಾಕುವಿನಿಂದ ಇರಿದಿದ್ದಾರೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಹಿಳೆಯನ್ನು ಪ್ರೇಮಲತಾ ಎಂದು ಗುರುತಿಸಲಾಗಿದ್ದು, ಇವರ ಪತಿಯ ಹೆಸರು ವೆಲೈಚಾಮಿ.  ಬ್ಯಾಂಕ್​​ನೊಳಗೇ ಆಕೆಗೆ ಚಾಕುವಿನಿಂದ ಹಲ್ಲೆ ಮಾಡಿ ಇಬ್ಬರೂ ಓಡಿಹೋಗಿದ್ದಾರೆ. ಆರೋಪಿಗಳನ್ನು ಹಿಡಿಯಲು ಬ್ಯಾಂಕ್​ ಸಿಬ್ಬಂದಿ ಮತ್ತು ಅಲ್ಲಿಯೇ ಇದ್ದ ಇತರರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಇಂಡಿಯಾ ಟುಡೆ ವರದಿಯಲ್ಲಿ ತಿಳಿಸಿದೆ.  ಹಲ್ಲೆಗೊಳಗಾಗಿ ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅನಿರೀಕ್ಷಿತವಾಗಿ ನಡೆದ ಈ ಘಟನೆ ನೋಡಿ ಇಡೀ ಬ್ಯಾಂಕ್​ ಬೆಚ್ಚಿಬಿದ್ದಿದೆ.

ದಂಪತಿ ಒಟ್ಟಿಗೇ ಇರಲಿಲ್ಲ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಪ್ರೇಮಲತಾ ಮತ್ತು  ವೆಲೈಚಾಮಿ ಒಟ್ಟಿಗೇ ಇರಲಿಲ್ಲ. ಮದುವೆಯಾಗಿ ಕೆಲ ವರ್ಷಗಳ ಬಳಿಕ ವೆಲೈಚಾಮಿಗೆ ಪತ್ನಿಯ ಮೇಲೆ ಅನುಮಾನ ಶುರುವಾಯಿತು. ಆಕೆ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ.  ನಂತರ ಇಬ್ಬರೂ ಪ್ರತ್ಯೇಕವಾಗಿದ್ದರೂ ಕೂಡ ವೆಲೈಚಾಮಿ ದುಡ್ಡಿಗಾಗಿ ಅವಳ ಬೆನ್ನುಬಿದ್ದಿದ್ದ. ಅವಳ ಆಸ್ತಿಯನ್ನು ತನಗೇ ಕೊಡುವಂತೆ ಒತ್ತಡ ತರುತ್ತಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಬ್ಯಾಂಕ್​​ನಲ್ಲಿ ಘಟನೆ ನಡೆದಾಗ ಇದ್ದ ಗ್ರಾಹಕರಲ್ಲಿ ಒಬ್ಬರು ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದು, ಅದನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ನೆಲ ಜಲ ವಿಚಾರದಲ್ಲಿ ನಾವೆಲ್ಲಾ ಒಂದು: ಮೇಕೆದಾಟು ಯೋಜನೆಗಾಗಿ ತೊಡೆತಟ್ಟಿದ ಸರ್ವಪಕ್ಷಗಳ ನಾಯಕರು!

Published On - 4:05 pm, Tue, 22 March 22

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?