AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬ್ಯಾಂಕ್​​ನಲ್ಲಿ ಹಣ ಠೇವಣಿ ಮಾಡಲು ಬಂದ ಮಹಿಳೆ; ಬೆನ್ನಟ್ಟಿ ಬಂದು ಎಲ್ಲರೆದುರೇ ಚಾಕುವಿನಿಂದ ಇರಿದ ಪತಿ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Mar 22, 2022 | 4:05 PM

Share

ಬ್ಯಾಂಕ್​​ನಲ್ಲಿ ಹಣ ಠೇವಣಿ ಇಡಲು ಬಂದ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಸ್ನೇಹಿತ ಸೇರಿ ಕುಡುಗೋಲು, ಚಾಕುವಿನಿಂದ ಇರಿದಿದ್ದಾರೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಹಿಳೆಯನ್ನು ಪ್ರೇಮಲತಾ ಎಂದು ಗುರುತಿಸಲಾಗಿದ್ದು, ಇವರ ಪತಿಯ ಹೆಸರು ವೆಲೈಚಾಮಿ.  ಬ್ಯಾಂಕ್​​ನೊಳಗೇ ಆಕೆಗೆ ಚಾಕುವಿನಿಂದ ಹಲ್ಲೆ ಮಾಡಿ ಇಬ್ಬರೂ ಓಡಿಹೋಗಿದ್ದಾರೆ. ಆರೋಪಿಗಳನ್ನು ಹಿಡಿಯಲು ಬ್ಯಾಂಕ್​ ಸಿಬ್ಬಂದಿ ಮತ್ತು ಅಲ್ಲಿಯೇ ಇದ್ದ ಇತರರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಇಂಡಿಯಾ ಟುಡೆ ವರದಿಯಲ್ಲಿ ತಿಳಿಸಿದೆ.  ಹಲ್ಲೆಗೊಳಗಾಗಿ ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅನಿರೀಕ್ಷಿತವಾಗಿ ನಡೆದ ಈ ಘಟನೆ ನೋಡಿ ಇಡೀ ಬ್ಯಾಂಕ್​ ಬೆಚ್ಚಿಬಿದ್ದಿದೆ.

ದಂಪತಿ ಒಟ್ಟಿಗೇ ಇರಲಿಲ್ಲ

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಬ್ಯಾಂಕ್​ ಸಿಬ್ಬಂದಿ ಕೂಡಲೇ ಪೊಲಿಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆಯನ್ನೂ ನಡೆಸಿದ್ದಾರೆ.  ಪ್ರೇಮಲತಾ ಮತ್ತು  ವೆಲೈಚಾಮಿ ಒಟ್ಟಿಗೇ ಇರಲಿಲ್ಲ. ಮದುವೆಯಾಗಿ ಕೆಲ ವರ್ಷಗಳ ಬಳಿಕ ವೆಲೈಚಾಮಿಗೆ ಪತ್ನಿಯ ಮೇಲೆ ಅನುಮಾನ ಶುರುವಾಯಿತು. ಆಕೆ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ.  ನಂತರ ಇಬ್ಬರೂ ಪ್ರತ್ಯೇಕವಾಗಿದ್ದರೂ ಕೂಡ ವೆಲೈಚಾಮಿ ದುಡ್ಡಿಗಾಗಿ ಅವಳ ಬೆನ್ನುಬಿದ್ದಿದ್ದ. ಅವಳ ಆಸ್ತಿಯನ್ನು ತನಗೇ ಕೊಡುವಂತೆ ಒತ್ತಡ ತರುತ್ತಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಬ್ಯಾಂಕ್​​ನಲ್ಲಿ ಘಟನೆ ನಡೆದಾಗ ಇದ್ದ ಗ್ರಾಹಕರಲ್ಲಿ ಒಬ್ಬರು ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದು, ಅದನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ನೆಲ ಜಲ ವಿಚಾರದಲ್ಲಿ ನಾವೆಲ್ಲಾ ಒಂದು: ಮೇಕೆದಾಟು ಯೋಜನೆಗಾಗಿ ತೊಡೆತಟ್ಟಿದ ಸರ್ವಪಕ್ಷಗಳ ನಾಯಕರು!

Published On - 4:05 pm, Tue, 22 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!