AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು

ಮಹಿಳೆಯೊಬ್ಬರು ಮಗನ ಹುಟ್ಟುಹಬ್ಬದ ದಿನವೇ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ವಿಡಿಯೋವೊಂದು ವೈರಲ್ ಆಗಿದ್ದು, ಅಲ್ಲಿ ಇದ್ದಕ್ಕಿದ್ದಂತೆ ಮಹಿಳೆ ಕುಸಿದು ಬೀಳುವುದನ್ನು ಕಾಣಬಹುದು.

ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು
ಮಹಿಳೆ ಸಾವು
ನಯನಾ ರಾಜೀವ್
|

Updated on:Sep 17, 2024 | 2:54 PM

Share

ಮಕ್ಕಳ ಹುಟ್ಟುಹಬ್ಬವೆಂದರೆ ಸಂಭ್ರಮ, ತಾಯಿಯಾದವಳು ಬೆಳಗ್ಗೆಯಿಂದಲೂ ಊಟ, ತಿಂಡಿ ಬಿಟ್ಟು ಮಗುವಿನ ಅಲಂಕಾರ, ಮನೆಯ ಡೆಕೋರೇಷನ್​ ಕಡೆಯೇ ಹೆಚ್ಚು ಗಮನ ಹರಿಸುವುದು ಸಾಮಾನ್ಯ. ಹಾಗೆಯೇ ಇಲ್ಲೊಬ್ಬ ತಾಯಿ ಮಗನ ಬರ್ತ್ ಡೇ ದಿನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಮಗನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯು ಪಾರ್ಟಿಯಲ್ಲಿ ಹೃದಯಾಘಾತದಿಂದ ಮಹಿಳೆ ಕೆಲಗೆ ಬೀಳುತ್ತಿರುವುದನ್ನು ಕಾಣಬಹುದು.

ವಲ್ಸಾದ್‌ನ ರಾಯಲ್ ಶೆಲ್ಟರ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಹುಟ್ಟುಹಬ್ಬವನ್ನು ಆಚರಿಸಲು ಕುಟುಂಬ ಸದಸ್ಯರು, ಸ್ನೇಹಿತರೆಲ್ಲಾ ಬಂದಿದ್ದರು. ವೀಡಿಯೊದಲ್ಲಿ ಕುಟುಂಬ ಸದಸ್ಯರು ನೃತ್ಯ ಮಾಡುವುದನ್ನು ಕಾಣಬಹುದು, ಆದರೆ ಮಹಿಳೆ, ಆಕೆಯ ಪತಿ ಮತ್ತು ಅವರ ಮಗು ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು.

ವಿಡಿಯೋದಲ್ಲಿ ಆಕೆ ಮಗುವನ್ನು ಪತಿಯ ಕೈಗೆ ಕೊಡುತ್ತಿರುವುದನ್ನು ಕಾಣಬಹುದು, ಆಕೆ ನಂತರ ತಲೆ ಹಿಡಿದುಕೊಂಡು ಕೆಳಗೆ ಕುಸಿದು ಬೀಳುತ್ತಾಳೆ. ಮಹಿಳೆಯು ಕುಸಿದು ಬೀಳುವ ಮೊದಲು ಗಂಡನ ಭುಜದ ಕಡೆಗೆ ವಾಲುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಟಿವಿ ನಟ ವಿಕಾಸ್ ಸೇಥಿಗೆ ಹೃದಯಾಘಾತ: ಅಜೀರ್ಣತೆ ದೇಹ ನೀಡುವ ಎಚ್ಚರಿಕೆಯಾಗಿರಬಹುದೇ?

ಕುಟುಂಬ ಸದಸ್ಯರು ಅವಳ ಸಹಾಯಕ್ಕೆ ಧಾವಿಸಿದರು, ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಆಗಲೇ ಮೃತಪಟ್ಟಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Tue, 17 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ