AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು

ಮಹಿಳೆಯೊಬ್ಬರು ಮಗನ ಹುಟ್ಟುಹಬ್ಬದ ದಿನವೇ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ವಿಡಿಯೋವೊಂದು ವೈರಲ್ ಆಗಿದ್ದು, ಅಲ್ಲಿ ಇದ್ದಕ್ಕಿದ್ದಂತೆ ಮಹಿಳೆ ಕುಸಿದು ಬೀಳುವುದನ್ನು ಕಾಣಬಹುದು.

ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು
ಮಹಿಳೆ ಸಾವು
ನಯನಾ ರಾಜೀವ್
|

Updated on:Sep 17, 2024 | 2:54 PM

Share

ಮಕ್ಕಳ ಹುಟ್ಟುಹಬ್ಬವೆಂದರೆ ಸಂಭ್ರಮ, ತಾಯಿಯಾದವಳು ಬೆಳಗ್ಗೆಯಿಂದಲೂ ಊಟ, ತಿಂಡಿ ಬಿಟ್ಟು ಮಗುವಿನ ಅಲಂಕಾರ, ಮನೆಯ ಡೆಕೋರೇಷನ್​ ಕಡೆಯೇ ಹೆಚ್ಚು ಗಮನ ಹರಿಸುವುದು ಸಾಮಾನ್ಯ. ಹಾಗೆಯೇ ಇಲ್ಲೊಬ್ಬ ತಾಯಿ ಮಗನ ಬರ್ತ್ ಡೇ ದಿನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಮಗನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯು ಪಾರ್ಟಿಯಲ್ಲಿ ಹೃದಯಾಘಾತದಿಂದ ಮಹಿಳೆ ಕೆಲಗೆ ಬೀಳುತ್ತಿರುವುದನ್ನು ಕಾಣಬಹುದು.

ವಲ್ಸಾದ್‌ನ ರಾಯಲ್ ಶೆಲ್ಟರ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಹುಟ್ಟುಹಬ್ಬವನ್ನು ಆಚರಿಸಲು ಕುಟುಂಬ ಸದಸ್ಯರು, ಸ್ನೇಹಿತರೆಲ್ಲಾ ಬಂದಿದ್ದರು. ವೀಡಿಯೊದಲ್ಲಿ ಕುಟುಂಬ ಸದಸ್ಯರು ನೃತ್ಯ ಮಾಡುವುದನ್ನು ಕಾಣಬಹುದು, ಆದರೆ ಮಹಿಳೆ, ಆಕೆಯ ಪತಿ ಮತ್ತು ಅವರ ಮಗು ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು.

ವಿಡಿಯೋದಲ್ಲಿ ಆಕೆ ಮಗುವನ್ನು ಪತಿಯ ಕೈಗೆ ಕೊಡುತ್ತಿರುವುದನ್ನು ಕಾಣಬಹುದು, ಆಕೆ ನಂತರ ತಲೆ ಹಿಡಿದುಕೊಂಡು ಕೆಳಗೆ ಕುಸಿದು ಬೀಳುತ್ತಾಳೆ. ಮಹಿಳೆಯು ಕುಸಿದು ಬೀಳುವ ಮೊದಲು ಗಂಡನ ಭುಜದ ಕಡೆಗೆ ವಾಲುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಟಿವಿ ನಟ ವಿಕಾಸ್ ಸೇಥಿಗೆ ಹೃದಯಾಘಾತ: ಅಜೀರ್ಣತೆ ದೇಹ ನೀಡುವ ಎಚ್ಚರಿಕೆಯಾಗಿರಬಹುದೇ?

ಕುಟುಂಬ ಸದಸ್ಯರು ಅವಳ ಸಹಾಯಕ್ಕೆ ಧಾವಿಸಿದರು, ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಆಗಲೇ ಮೃತಪಟ್ಟಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Tue, 17 September 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್