ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು

ಮಹಿಳೆಯೊಬ್ಬರು ಮಗನ ಹುಟ್ಟುಹಬ್ಬದ ದಿನವೇ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ವಿಡಿಯೋವೊಂದು ವೈರಲ್ ಆಗಿದ್ದು, ಅಲ್ಲಿ ಇದ್ದಕ್ಕಿದ್ದಂತೆ ಮಹಿಳೆ ಕುಸಿದು ಬೀಳುವುದನ್ನು ಕಾಣಬಹುದು.

ಮಗನ ಬರ್ತ್​ ಡೇ ಪಾರ್ಟಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು
ಮಹಿಳೆ ಸಾವು
Follow us
|

Updated on:Sep 17, 2024 | 2:54 PM

ಮಕ್ಕಳ ಹುಟ್ಟುಹಬ್ಬವೆಂದರೆ ಸಂಭ್ರಮ, ತಾಯಿಯಾದವಳು ಬೆಳಗ್ಗೆಯಿಂದಲೂ ಊಟ, ತಿಂಡಿ ಬಿಟ್ಟು ಮಗುವಿನ ಅಲಂಕಾರ, ಮನೆಯ ಡೆಕೋರೇಷನ್​ ಕಡೆಯೇ ಹೆಚ್ಚು ಗಮನ ಹರಿಸುವುದು ಸಾಮಾನ್ಯ. ಹಾಗೆಯೇ ಇಲ್ಲೊಬ್ಬ ತಾಯಿ ಮಗನ ಬರ್ತ್ ಡೇ ದಿನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಮಗನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯು ಪಾರ್ಟಿಯಲ್ಲಿ ಹೃದಯಾಘಾತದಿಂದ ಮಹಿಳೆ ಕೆಲಗೆ ಬೀಳುತ್ತಿರುವುದನ್ನು ಕಾಣಬಹುದು.

ವಲ್ಸಾದ್‌ನ ರಾಯಲ್ ಶೆಲ್ಟರ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಹುಟ್ಟುಹಬ್ಬವನ್ನು ಆಚರಿಸಲು ಕುಟುಂಬ ಸದಸ್ಯರು, ಸ್ನೇಹಿತರೆಲ್ಲಾ ಬಂದಿದ್ದರು. ವೀಡಿಯೊದಲ್ಲಿ ಕುಟುಂಬ ಸದಸ್ಯರು ನೃತ್ಯ ಮಾಡುವುದನ್ನು ಕಾಣಬಹುದು, ಆದರೆ ಮಹಿಳೆ, ಆಕೆಯ ಪತಿ ಮತ್ತು ಅವರ ಮಗು ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು.

ವಿಡಿಯೋದಲ್ಲಿ ಆಕೆ ಮಗುವನ್ನು ಪತಿಯ ಕೈಗೆ ಕೊಡುತ್ತಿರುವುದನ್ನು ಕಾಣಬಹುದು, ಆಕೆ ನಂತರ ತಲೆ ಹಿಡಿದುಕೊಂಡು ಕೆಳಗೆ ಕುಸಿದು ಬೀಳುತ್ತಾಳೆ. ಮಹಿಳೆಯು ಕುಸಿದು ಬೀಳುವ ಮೊದಲು ಗಂಡನ ಭುಜದ ಕಡೆಗೆ ವಾಲುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಟಿವಿ ನಟ ವಿಕಾಸ್ ಸೇಥಿಗೆ ಹೃದಯಾಘಾತ: ಅಜೀರ್ಣತೆ ದೇಹ ನೀಡುವ ಎಚ್ಚರಿಕೆಯಾಗಿರಬಹುದೇ?

ಕುಟುಂಬ ಸದಸ್ಯರು ಅವಳ ಸಹಾಯಕ್ಕೆ ಧಾವಿಸಿದರು, ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಆಗಲೇ ಮೃತಪಟ್ಟಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Tue, 17 September 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ