AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ

ಕರೀಂನಗರದಲ್ಲಿ ದರೋಡೆಗೊಳಗಾದ 55 ವರ್ಷದ ಲಕ್ಷ್ಮಿ, ಸಾಕ್ಷಿ ನಾಶಕ್ಕೆ ಕಳ್ಳನಿಂದ ಬಾವಿಗೆ ತಳ್ಳಲ್ಪಟ್ಟರು. 21 ಗಂಟೆಗಳ ಕಾಲ ಕತ್ತಲಲ್ಲಿ, ಕೇಬಲ್ ಆಧಾರದಲ್ಲಿ ಸಾವಿನೊಂದಿಗೆ ಹೋರಾಡಿ ಪವಾಡಸದೃಶವಾಗಿ ಬದುಕುಳಿದರು. ಆಕೆಯ ಧೈರ್ಯದಿಂದ ಆರೋಪಿ ವಿದ್ಯಾರ್ಥಿ ಬಂಧಿತನಾಗಿದ್ದು, ಆನ್‌ಲೈನ್ ಜೂಜಿನ ಸಾಲ ತೀರಿಸಲು ಕೃತ್ಯ ಎಸಗಿರುವುದು ಬಯಲಾಗಿದೆ. ಲಕ್ಷ್ಮಿಯ ಹೋರಾಟ ಒಂದು ಸ್ಫೂರ್ತಿದಾಯಕ ಕಥೆ.

ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ
ಬಾವಿ
ನಯನಾ ರಾಜೀವ್
|

Updated on: Jul 05, 2026 | 10:55 AM

Share

ಕರೀಂನಗರ, ಜುಲೈ 05: ಕಳ್ಳನೊಬ್ಬ ಒಡವೆ, ಹಣ ದೋಚಿ ಸಾಕ್ಷಿ ನಾಶಪಡಿಸಲು 55 ವರ್ಷದ ಮಹಿಳೆಯೊಬ್ಬರನ್ನು ಕೃಷಿ ಬಾವಿ(Well)ಗೆ ತಳ್ಳಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಸಾವಿನ ದವಡೆಯಿಂದ ಪಾರಾದ ಮಹಿಳೆ ಸುಮಾರು 21 ಗಂಟೆಗಳ ಕಾಲ ಬಾವಿಯಲ್ಲೇ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಆಕೆಯ ಧೈರ್ಯದಿಂದಾಗಿ ಪೊಲೀಸರು 21 ವರ್ಷದ ಆರೋಪಿ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಲಸದ ಆಮಿಷ ಒಡ್ಡಿ ದರೋಡೆ ದಿನಗೂಲಿ ಕಾರ್ಮಿಕರಾದ ತಂಗರಾಲ ಲಕ್ಷ್ಮೀ ಎಂಬುವವರು ಜುಲೈ 1 ರಂದು ಕೆಲಸಕ್ಕೆ ಹೋಗಿ ಮನೆಗೆ ಮರಳದಿದ್ದಾಗ, ಅವರ ಮಗ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ತನಿಖೆ ನಡೆಸಿದಾಗ ಕರಾಳ ಸತ್ಯ ಹೊರಬಿದ್ದಿದೆ. ಆರೋಪಿ ಧಮ್ಮ ದಿನೇಶ್ ರೆಡ್ಡಿ (21) ಎಂಬಾತ ಲಕ್ಷ್ಮೀಗೆ ತನ್ನ ಜಮೀನಿನಲ್ಲಿ ಕೆಲಸ ಕೊಡುವುದಾಗಿ ನಂಬಿಸಿ, ಮೊದಲು ರಾಪಿಡೋ ಬೈಕ್‌ನಲ್ಲಿ ಹಾಗೂ ನಂತರ ತನ್ನದೇ ಬೈಕ್‌ನಲ್ಲಿ ಜನರಿಲ್ಲದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿ ಲಕ್ಷ್ಮೀಯನ್ನು ಹೆದರಿಸಿ ಅವರಲ್ಲಿದ್ದ 5 ಗ್ರಾಂ ಚಿನ್ನ, 20 ಗ್ರಾಂ ಬೆಳ್ಳಿಯ ಕಾಲ್ಗೆಜ್ಜೆ ಹಾಗೂ ನಗದನ್ನು ದೋಚಿದ್ದ.

ಸಾಕ್ಷಿ ನಾಶಕ್ಕೆ ಸಂಚು, ಹಗ್ಗ ಕತ್ತರಿಸಿದ ಪಾಪಿ ದರೋಡೆ ಮಾಡಿದ ನಂತರ ಯಾರೂ ತನ್ನನ್ನು ಕಂಡುಹಿಡಿಯಬಾರದೆಂದು ಆರೋಪಿ ದಿನೇಶ್ ರೆಡ್ಡಿ ಆಕೆಯನ್ನು ಆಳವಾದ ಕೃಷಿ ಬಾವಿಗೆ ತಳ್ಳಿದ್ದಾನೆ. ಬಾವಿಗೆ ಬಿದ್ದ ತಕ್ಷಣ ಲಕ್ಷ್ಮೀ ಅಲ್ಲಿದ್ದ ಹಗ್ಗವೊಂದನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಇದನ್ನು ಗಮನಿಸಿದ ಕ್ರೂರಿ ಆರೋಪಿ, ಆಕೆ ಹೇಗೊ ಬದುಕುಳಿಯಬಾರದು ಎಂದು ಆ ಹಗ್ಗವನ್ನೂ ಕತ್ತರಿಸಿ ಅಲ್ಲಿಂದ ಪರಾರಿಯಾಗಿದ್ದ.

ಮತ್ತಷ್ಟು ಓದಿ: ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!

ಸಾವು ಗೆದ್ದ ಈಜು ಮತ್ತು ಧೈರ್ಯ ಲಕ್ಷ್ಮೀ ಅವರಿಗೆ ಈಜು ಬರುತ್ತಿದ್ದ ಕಾರಣ ಬಾವಿಯ ನೀರಿನಲ್ಲಿ ತೇಲುತ್ತಾ, ಮೋಟಾರ್ ಪೈಪ್‌ಲೈನ್‌ಗೆ ಜೋಡಿಸಲಾಗಿದ್ದ ಮತ್ತೊಂದು ಕೇಬಲ್ ವೈರ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿರ್ಜನ ಪ್ರದೇಶವಾದ್ದರಿಂದ ಆಕೆಯ ಕಿರುಚಾಟ ಯಾರಿಗೂ ಕೇಳಿಸಲಿಲ್ಲ. ಹಾಗಾಗಿ ಇಡೀ ರಾತ್ರಿ ಕತ್ತಲಲ್ಲಿ, ಕೇವಲ ಆ ಕೇಬಲ್ ವೈರ್ ಆಸರೆಯಲ್ಲಿ ಸುಮಾರು 20 ರಿಂದ 21 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿದರು. ಮರುದಿನ ಬೆಳಗ್ಗೆ ಸ್ಥಳೀಯ ರೈತರು ಬಾವಿಯಿಂದ ಶಬ್ದ ಕೇಳಿ ಆಕೆಯನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದರು.

ಕರೀಂನಗರ ಪೊಲೀಸ್ ಆಯುಕ್ತ ಗೌಸ್ ಆಲಂ ನೇತೃತ್ವದ ವಿಶೇಷ ತಂಡವು ರಾಪಿಡೋ ಬುಕಿಂಗ್, ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ತಾಂತ್ರಿಕ ತನಿಖೆ ನಡೆಸಿ ಆರೋಪಿ ಧಮ್ಮ ದಿನೇಶ್ ರೆಡ್ಡಿಯನ್ನು ಬಂಧಿಸಿದೆ. 21 ವರ್ಷದ ಈ ಕಾಲೇಜು ವಿದ್ಯಾರ್ಥಿ ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಬರೋಬ್ಬರಿ 4 ಲಕ್ಷ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ. ಆ ಸಾಲ ತೀರಿಸಲು ಈ ದರೋಡೆ ಹಾಗೂ ಕೊಲೆ ಯತ್ನದ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕದ್ದ ಒಡವೆಗಳನ್ನು ಖರೀದಿಸಿದ ಆಭರಣ ವ್ಯಾಪಾರಿಯನ್ನೂ ಪೊಲೀಸರು ಬಂಧಿಸಿದ್ದು, ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ